ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ ಕಡಿಯುವುದನ್ನು ನಿಲ್ಲಿಸಿ: ಶಾಸಕ ಎಸ್.ಆರ್.ಶ್ರೀನಿವಾಸ್

Last Updated 6 ಜೂನ್ 2020, 9:03 IST
ಅಕ್ಷರ ಗಾತ್ರ

ಗುಬ್ಬಿ: ‘ಅರಣ್ಯ ವ್ಯಾಪ್ತಿಯ ಗಡಿಭಾಗದ ಗ್ರಾಮಸ್ಥರು ಹಾಗೂ ರೈತರು ಮರಗಳನ್ನು ಕಡಿಯುವುದನ್ನು ನಿಲ್ಲಿಸಿ, ನೀವೇ ರಕ್ಷಣೆಯ ಕಾರ್ಯಕ್ಕೆ ಮುಂದಾಗಬೇಕು’ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಕೃಷಿ ಇಲಾಖೆ ಹಾಗೂ ಪಶು ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಎಂದಿನಂತೆ ಪ್ರತಿವರ್ಷ ವಲಯ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯಿಂದ 4 ಲಕ್ಷ ಸಸಿಗಳನ್ನು ನೀಡುತ್ತಿದ್ದು, ಅರಣ್ಯ ಪ್ರದೇಶ ಮಾತ್ರ ವಿಸ್ತರಣೆಯಾಗುತ್ತಿಲ್ಲ. ಅಭಿವೃದ್ಧಿ ಹೆಸರಲ್ಲಿ ಕಾಡನ್ನು ನಾಶ ಮಾಡಲಾಗುತ್ತಿದೆ. ಭವಿಷ್ಯದ ಪೀಳಿಗೆಯ ಹಿತದೃಷ್ಟಿಯಿಂದ ಮರಗಳನ್ನು ಬೆಳಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಡಾ.ಪ್ರದೀಪ್‍ಕುಮಾರ್, ಪಂಟ್ಟಣ ಪಂಚಾಯಿತಿ ಸದಸ್ಯರಾದ ಕುಮಾರ್, ರೇಣುಕಾ ಪ್ರಸಾದ್, ಶಿವಕುಮಾರ್, ಮಂಗಳಾಶಿವಪ್ಪ, ಇ.ಒ.ನರಸಿಂಹಯ್ಯ, ವಲಯ ಅರಣ್ಯಾಧಿಕಾರಿ ಸಿ.ರವಿ, ಸಾಮಾಜಿಕ ಅರಣ್ಯ ವಲಯ ಅಧಿಕಾರಿ ಜಿತೇಂದ್ರ, ಕೃಷಿ ಇಲಾಖೆಯ ನಿರ್ದೇಶಕ ಕೆಂಪಚೌಡಯ್ಯ, ಶಿವಣ್ಣ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT