<p><strong>ತುಮಕೂರು</strong>: ವಿಶ್ವ ಹೃದಯ ದಿನದ ಅಂಗವಾಗಿ ಸಿದ್ಧಗಂಗಾ ಆಸ್ಪತ್ರೆಯಿಂದ ನಗರದಲ್ಲಿ ಭಾನುವಾರ ಸಿದ್ಧಗಂಗಾ ಹೆಲ್ತ್ರನ್ 10ಕೆ ಮ್ಯಾರಥಾನ್ ಆಯೋಜಿಸಲಾಗಿತ್ತು.</p>.<p>ಜಿಟಿ ಜಿಟಿ ಮಳೆಯಲ್ಲಿ ಮ್ಯಾರಥಾನ್ ನಡೆಯಿತು. 10ಕೆ ಮ್ಯಾರಥಾನ್ ಪುರುಷ ವಿಭಾಗದಲ್ಲಿ ಶಿವಾನಂದ ಚಿಗಾರಿ, ಮಹಿಳೆಯರ ವಿಭಾಗದಲ್ಲಿ ಮೇಘಾಶ್ರೀ ಪದಕ ಪಡೆದರೆ, 5ಕೆ ವಿಭಾಗದಲ್ಲಿ ಗೋಪಿ, ಎಂ.ಮೇಘಾಶ್ರೀ, 50 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ವಿ.ರಾಜಣ್ಣ ಮೊದಲ ಬಹುಮಾನ ಪಡೆದರು.</p>.<p>ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿ, ಮನುಷ್ಯ ಆಚಾರ-ವಿಚಾರ ಜತೆಗೆ ವ್ಯಾಯಾಮ, ಪೌಷ್ಟಿಕ ಆಹಾರ ಕ್ರಮ ರೂಢಿಸಿಕೊಳ್ಳಬೇಕು. ಇತ್ತೀಚೆಗಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ. ದೈಹಿಕ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.</p>.<p>ಒಲಂಪಿಕ್ ಕ್ರೀಡಾಪಟು ಅಶ್ವಿನಿ ಅಕ್ಕುಂಜಿ, ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್, ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ಕಾರ್ಯದರ್ಶಿ ಟಿ.ಎಂ.ಸ್ವಾಮಿ, ಪ್ರಾಂಶುಪಾಲರಾದ ಡಾ.ಶಾಲಿನಿ, ವೈದ್ಯಕೀಯ ಆಧೀಕ್ಷಕ ಡಾ.ನಿರಂಜನಮೂರ್ತಿ, ವೈದ್ಯರಾದ ಭಾನುಪ್ರಕಾಶ್, ಡಾ.ಶರತ್ ಕುಮಾರ್, ಡಾ.ನಿಲೇಶ್ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ವಿಶ್ವ ಹೃದಯ ದಿನದ ಅಂಗವಾಗಿ ಸಿದ್ಧಗಂಗಾ ಆಸ್ಪತ್ರೆಯಿಂದ ನಗರದಲ್ಲಿ ಭಾನುವಾರ ಸಿದ್ಧಗಂಗಾ ಹೆಲ್ತ್ರನ್ 10ಕೆ ಮ್ಯಾರಥಾನ್ ಆಯೋಜಿಸಲಾಗಿತ್ತು.</p>.<p>ಜಿಟಿ ಜಿಟಿ ಮಳೆಯಲ್ಲಿ ಮ್ಯಾರಥಾನ್ ನಡೆಯಿತು. 10ಕೆ ಮ್ಯಾರಥಾನ್ ಪುರುಷ ವಿಭಾಗದಲ್ಲಿ ಶಿವಾನಂದ ಚಿಗಾರಿ, ಮಹಿಳೆಯರ ವಿಭಾಗದಲ್ಲಿ ಮೇಘಾಶ್ರೀ ಪದಕ ಪಡೆದರೆ, 5ಕೆ ವಿಭಾಗದಲ್ಲಿ ಗೋಪಿ, ಎಂ.ಮೇಘಾಶ್ರೀ, 50 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ವಿ.ರಾಜಣ್ಣ ಮೊದಲ ಬಹುಮಾನ ಪಡೆದರು.</p>.<p>ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿ, ಮನುಷ್ಯ ಆಚಾರ-ವಿಚಾರ ಜತೆಗೆ ವ್ಯಾಯಾಮ, ಪೌಷ್ಟಿಕ ಆಹಾರ ಕ್ರಮ ರೂಢಿಸಿಕೊಳ್ಳಬೇಕು. ಇತ್ತೀಚೆಗಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ. ದೈಹಿಕ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.</p>.<p>ಒಲಂಪಿಕ್ ಕ್ರೀಡಾಪಟು ಅಶ್ವಿನಿ ಅಕ್ಕುಂಜಿ, ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್, ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ಕಾರ್ಯದರ್ಶಿ ಟಿ.ಎಂ.ಸ್ವಾಮಿ, ಪ್ರಾಂಶುಪಾಲರಾದ ಡಾ.ಶಾಲಿನಿ, ವೈದ್ಯಕೀಯ ಆಧೀಕ್ಷಕ ಡಾ.ನಿರಂಜನಮೂರ್ತಿ, ವೈದ್ಯರಾದ ಭಾನುಪ್ರಕಾಶ್, ಡಾ.ಶರತ್ ಕುಮಾರ್, ಡಾ.ನಿಲೇಶ್ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>