<p>ತುಮಕೂರು: ಪ್ರಸ್ತುತ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿವೆ. ತಮ್ಮ ಜತೆಗೆ ಇತರರ ಬದುಕಿಗೂ ಪೂರಕವಾದ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿ.ಪಂ ಸಿಇಒ ಜಿ.ಪ್ರಭು ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಭಾನುವಾರ ಜಿಲ್ಲಾ ಆಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಇನ್ನರ್ ವ್ಹೀಲ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹಿರಿಯ ನಾಗರಿಕರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಎಲ್ಲರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಹಿರಿಯ ನಾಗರಿಕರಿಗೆ ಮನ್ನಣೆ ನೀಡುವ ಮೂಲಕ ಅವರ ಆತ್ಮ ವಿಶ್ವಾಸ ಹೆಚ್ಚಿಸಬೇಕು ಎಂದು ಸಲಹೆ ಮಾಡಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ‘ಹಿರಿಯ ನಾಗರಿಕರು ಶಕ್ತಿ ಇದ್ದ ಸಮಯದಲ್ಲಿ ಗಳಿಸಿದ ಆದಾಯವನ್ನು ಕೊನೆಗಾಲದ ತನಕ ಉಳಿಸಿಕೊಳ್ಳಬೇಕು. ಆಸ್ತಿ ಆಸೆಯಿಂದಾದರೂ ಮಕ್ಕಳು, ಸಂಬಂಧಿಕರು ಸರಿಯಾದ ರೀತಿಯಲ್ಲಿ ನೋಡಿಕೊಳುತ್ತಾರೆ’ ಎಂದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಂ.ಎಸ್.ಶ್ರೀಧರ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಜಿಲ್ಲಾ ಕಲ್ಯಾಣಾಧಿಕಾರಿ ಎಂ.ರಮೇಶ್, ನಿವೃತ್ತ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಕಾರ್ಯದರ್ಶಿ ಎಂ.ಜಿ.ತಿಮ್ಮಾರೆಡ್ಡಿ, ಹಿರಿಯ ಸ್ವಾತಂತ್ರ ಹೋರಾಟಗಾರ ಟಿ.ಆರ್.ರೇವಣ್ಣ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಪ್ರಸ್ತುತ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿವೆ. ತಮ್ಮ ಜತೆಗೆ ಇತರರ ಬದುಕಿಗೂ ಪೂರಕವಾದ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿ.ಪಂ ಸಿಇಒ ಜಿ.ಪ್ರಭು ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಭಾನುವಾರ ಜಿಲ್ಲಾ ಆಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಇನ್ನರ್ ವ್ಹೀಲ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹಿರಿಯ ನಾಗರಿಕರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಎಲ್ಲರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಹಿರಿಯ ನಾಗರಿಕರಿಗೆ ಮನ್ನಣೆ ನೀಡುವ ಮೂಲಕ ಅವರ ಆತ್ಮ ವಿಶ್ವಾಸ ಹೆಚ್ಚಿಸಬೇಕು ಎಂದು ಸಲಹೆ ಮಾಡಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ‘ಹಿರಿಯ ನಾಗರಿಕರು ಶಕ್ತಿ ಇದ್ದ ಸಮಯದಲ್ಲಿ ಗಳಿಸಿದ ಆದಾಯವನ್ನು ಕೊನೆಗಾಲದ ತನಕ ಉಳಿಸಿಕೊಳ್ಳಬೇಕು. ಆಸ್ತಿ ಆಸೆಯಿಂದಾದರೂ ಮಕ್ಕಳು, ಸಂಬಂಧಿಕರು ಸರಿಯಾದ ರೀತಿಯಲ್ಲಿ ನೋಡಿಕೊಳುತ್ತಾರೆ’ ಎಂದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಂ.ಎಸ್.ಶ್ರೀಧರ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಜಿಲ್ಲಾ ಕಲ್ಯಾಣಾಧಿಕಾರಿ ಎಂ.ರಮೇಶ್, ನಿವೃತ್ತ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಕಾರ್ಯದರ್ಶಿ ಎಂ.ಜಿ.ತಿಮ್ಮಾರೆಡ್ಡಿ, ಹಿರಿಯ ಸ್ವಾತಂತ್ರ ಹೋರಾಟಗಾರ ಟಿ.ಆರ್.ರೇವಣ್ಣ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>