<p>ತುಮಕೂರು: ಹುಳು ಬಿದ್ದ ಧಾನ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಿ ಮಕ್ಕಳಿಗೆ ನೀಡುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ.ಸುರೇಶ್ಗೌಡ ಒತ್ತಾಯಿಸಿದರು.</p>.<p>ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಕೆ.ಜಿ ₹93 ಇದೆ. ಆದರೆ ಮಕ್ಕಳ ಬಿಸಿಯೂಟಕ್ಕೆ ಕೆ.ಜಿ ₹63ಕ್ಕೆ ಬೇಳೆ ಪೂರೈಕೆ ಮಾಡಲಾಗುತ್ತಿದೆ. ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಪೂರೈಕೆ ಮಾಡಲು ಹೇಗೆ ಸಾಧ್ಯ? ಇಷ್ಟು ಬೆಲೆಗೆ ಇನ್ನೆಂತಹ ಗುಣಮಟ್ಟದ ತೊಗರಿ ಬೇಳೆ ಪೂರೈಕೆ ಮಾಡಲಿದ್ದಾರೆ ಎಂದು ವಿಧಾನಸಭೆಯಲ್ಲಿ ಪ್ರಶ್ನಿಸಿದರು.</p>.<p>ಹಸು, ಹಂದಿಯೂ ತಿನ್ನುವುದಿಲ್ಲ. ಅಂತಹ ತೊಗರಿ ಬೇಳೆಯನ್ನು ಶಾಲಾ ಮಕ್ಕಳ ಊಟ ತಯಾರಿಸಲು ಬಳಸಲಾಗುತ್ತಿದೆ. ಆದರೆ ಅಕ್ಷರ ದಾಸೋಹ ಸಮಿತಿ ಏನು ಮಾಡುತ್ತಿದೆ? ಇಲಾಖೆ ಆಯುಕ್ತರೇ ಟೆಂಡರ್ ಅಂತಿಮಗೊಳಿಸುತ್ತಾರೆ. ಪಿ.ಎಂ ಪೋಷಣ್ ಎಂಬ ಪ್ರಧಾನಿ ಹೆಸರಿನಲ್ಲಿರುವ ಈ ಯೋಜನೆಗೆ ಒಬ್ಬ ನಿರ್ದೇಶಕರೂ ಇರುತ್ತಾರೆ. ಈ ಇಬ್ಬರು ಅಧಿಕಾರಿಗಳು ಮುಖ್ಯ ಹೊಣೆಗಾರರು. ಈ ಬಗ್ಗೆ ತನಿಖೆ ನಡೆಸಿ ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಮಾದರಿ (ಸ್ಯಾಂಪಲ್) ತೋರಿಸುವ ಸಮಯದಲ್ಲಿ ಕೊಡುವ ಬೇಳೆಯೇ ಬೇರೆ. ಶಾಲೆಗಳಿಗೆ ಸರಬರಾಜು ಮಾಡುವ ಮೂಟೆಯೇ ಬೇರೆ. ರಾಜ್ಯದಲ್ಲಿ ನಡೆದಿರುವ ಈ ಹಗರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಹುಳು ಬಿದ್ದ ಧಾನ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಿ ಮಕ್ಕಳಿಗೆ ನೀಡುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ.ಸುರೇಶ್ಗೌಡ ಒತ್ತಾಯಿಸಿದರು.</p>.<p>ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಕೆ.ಜಿ ₹93 ಇದೆ. ಆದರೆ ಮಕ್ಕಳ ಬಿಸಿಯೂಟಕ್ಕೆ ಕೆ.ಜಿ ₹63ಕ್ಕೆ ಬೇಳೆ ಪೂರೈಕೆ ಮಾಡಲಾಗುತ್ತಿದೆ. ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಪೂರೈಕೆ ಮಾಡಲು ಹೇಗೆ ಸಾಧ್ಯ? ಇಷ್ಟು ಬೆಲೆಗೆ ಇನ್ನೆಂತಹ ಗುಣಮಟ್ಟದ ತೊಗರಿ ಬೇಳೆ ಪೂರೈಕೆ ಮಾಡಲಿದ್ದಾರೆ ಎಂದು ವಿಧಾನಸಭೆಯಲ್ಲಿ ಪ್ರಶ್ನಿಸಿದರು.</p>.<p>ಹಸು, ಹಂದಿಯೂ ತಿನ್ನುವುದಿಲ್ಲ. ಅಂತಹ ತೊಗರಿ ಬೇಳೆಯನ್ನು ಶಾಲಾ ಮಕ್ಕಳ ಊಟ ತಯಾರಿಸಲು ಬಳಸಲಾಗುತ್ತಿದೆ. ಆದರೆ ಅಕ್ಷರ ದಾಸೋಹ ಸಮಿತಿ ಏನು ಮಾಡುತ್ತಿದೆ? ಇಲಾಖೆ ಆಯುಕ್ತರೇ ಟೆಂಡರ್ ಅಂತಿಮಗೊಳಿಸುತ್ತಾರೆ. ಪಿ.ಎಂ ಪೋಷಣ್ ಎಂಬ ಪ್ರಧಾನಿ ಹೆಸರಿನಲ್ಲಿರುವ ಈ ಯೋಜನೆಗೆ ಒಬ್ಬ ನಿರ್ದೇಶಕರೂ ಇರುತ್ತಾರೆ. ಈ ಇಬ್ಬರು ಅಧಿಕಾರಿಗಳು ಮುಖ್ಯ ಹೊಣೆಗಾರರು. ಈ ಬಗ್ಗೆ ತನಿಖೆ ನಡೆಸಿ ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಮಾದರಿ (ಸ್ಯಾಂಪಲ್) ತೋರಿಸುವ ಸಮಯದಲ್ಲಿ ಕೊಡುವ ಬೇಳೆಯೇ ಬೇರೆ. ಶಾಲೆಗಳಿಗೆ ಸರಬರಾಜು ಮಾಡುವ ಮೂಟೆಯೇ ಬೇರೆ. ರಾಜ್ಯದಲ್ಲಿ ನಡೆದಿರುವ ಈ ಹಗರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>