<p><strong>ಕೊರಟಗೆರೆ:</strong> ಇಲ್ಲಿನ ಮೂಡ್ಲಪಣ್ಣೆ ಶಿರಡಿಸಾಯಿಬಾಬ ಮಂದಿರದಲ್ಲಿ ಗುರುವಾರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಸಾವಿರಾರು ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.</p>.<p>ಪಟ್ಟಣದ ಶಿರಡಿ ಸಾಯಿಬಾಬ ಮಂದಿರದ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುರು ಪೂರ್ಣಿಮೆ ಅಂಗವಾಗಿ ಮುಂಜಾನೆ 5 ಗಂಟೆಯಿಂದಲೇ ಪೂಜಾ ಕಾರ್ಯಕ್ರಮ ಕೈಗೊಳ್ಳಲಾಗಿತ್ತು. 5 ಗಂಟೆಗೆ ಕ್ಷೀರಾಭಿಷೇಕ, ಕಾಕಡ ಆರತಿ ಉತ್ಸವ, ದೇವಲಯದ ಗೋಪುರಕ್ಕೆ ನೂತನ ಕಳಷ ಸ್ಥಾಪನೆ ಮಾಡಲಾಯಿತು.</p>.<p>ಸುಪ್ರಭಾತ ಸೇವೆ, ಮೂಲ ದೇವರಿಗೆ ಅಭಿಷೇಕ, ವಿಷ್ಣು ಸಹಸ್ರನಾಮ ಪರಾಯಣ, ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು. ಸಂಜೆ 6-30ರಿಂದ 9-30ರ ವರೆಗೆ ಬೆಂಗಳೂರು ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದ ಪ್ರತಾಪ್ ಹಾಗೂ ಸಂಗಡಿಗರಿಂದ ಭಜನಾ ಕಾರ್ಯಕ್ರಮ ಹಾಗೂ ವಾಸವಿ ಮಹಿಳಾ ಮಂಡಲಿ ಮಹಿಳೆಯರಿಂದ ಭಕ್ತಿಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ಶಿರಡಿ ಸಾಯಿಬಾಬಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಸುದಾಮಣಿ, ಶಂಕರನಾರಾಯಣ ಶ್ರೇಷ್ಟಿ, ಕಾರ್ಯದರ್ಶಿ ಆರ್.ಮಲ್ಲಿಕಾರ್ಜುನ್, ಖಜಾಂಚಿ ಪ್ರಕಾಶ್ ಕುಮಾರ್, ನಿರ್ದೇಶಕರಾದ ಬದ್ರಿಪ್ರಸಾದ್, ನವೀನ್ ಕುಮಾರ್, ರತ್ನಾಕರ್, ಅರ್ಚಕ ಸಂಜಯ್ ಮಿಶ್ರ, ಹರ್ಷ, ಪುಟ್ಟರಾಜು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ:</strong> ಇಲ್ಲಿನ ಮೂಡ್ಲಪಣ್ಣೆ ಶಿರಡಿಸಾಯಿಬಾಬ ಮಂದಿರದಲ್ಲಿ ಗುರುವಾರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಸಾವಿರಾರು ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.</p>.<p>ಪಟ್ಟಣದ ಶಿರಡಿ ಸಾಯಿಬಾಬ ಮಂದಿರದ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುರು ಪೂರ್ಣಿಮೆ ಅಂಗವಾಗಿ ಮುಂಜಾನೆ 5 ಗಂಟೆಯಿಂದಲೇ ಪೂಜಾ ಕಾರ್ಯಕ್ರಮ ಕೈಗೊಳ್ಳಲಾಗಿತ್ತು. 5 ಗಂಟೆಗೆ ಕ್ಷೀರಾಭಿಷೇಕ, ಕಾಕಡ ಆರತಿ ಉತ್ಸವ, ದೇವಲಯದ ಗೋಪುರಕ್ಕೆ ನೂತನ ಕಳಷ ಸ್ಥಾಪನೆ ಮಾಡಲಾಯಿತು.</p>.<p>ಸುಪ್ರಭಾತ ಸೇವೆ, ಮೂಲ ದೇವರಿಗೆ ಅಭಿಷೇಕ, ವಿಷ್ಣು ಸಹಸ್ರನಾಮ ಪರಾಯಣ, ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು. ಸಂಜೆ 6-30ರಿಂದ 9-30ರ ವರೆಗೆ ಬೆಂಗಳೂರು ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದ ಪ್ರತಾಪ್ ಹಾಗೂ ಸಂಗಡಿಗರಿಂದ ಭಜನಾ ಕಾರ್ಯಕ್ರಮ ಹಾಗೂ ವಾಸವಿ ಮಹಿಳಾ ಮಂಡಲಿ ಮಹಿಳೆಯರಿಂದ ಭಕ್ತಿಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ಶಿರಡಿ ಸಾಯಿಬಾಬಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಸುದಾಮಣಿ, ಶಂಕರನಾರಾಯಣ ಶ್ರೇಷ್ಟಿ, ಕಾರ್ಯದರ್ಶಿ ಆರ್.ಮಲ್ಲಿಕಾರ್ಜುನ್, ಖಜಾಂಚಿ ಪ್ರಕಾಶ್ ಕುಮಾರ್, ನಿರ್ದೇಶಕರಾದ ಬದ್ರಿಪ್ರಸಾದ್, ನವೀನ್ ಕುಮಾರ್, ರತ್ನಾಕರ್, ಅರ್ಚಕ ಸಂಜಯ್ ಮಿಶ್ರ, ಹರ್ಷ, ಪುಟ್ಟರಾಜು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>