<p>ತುಮಕೂರು: ರಾಘವೇಂದ್ರಸ್ವಾಮಿಗಳ 348ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಗರದ ವಿವಿಧ ಬಡಾವಣೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ನಡೆಯಿತು.</p>.<p>ಮಹೋತ್ಸವದ ಕೊನೆಯ ದಿನವಾಗಿದ್ದರಿಂದ ಪೂರ್ವಾರಾಧನೆ, ಮಧ್ಯಾರಾಧನೆ ದಿನ ರಾಯರ ದರ್ಶನ ಪಡೆಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಠಗಳಿಗೆ ತೆರಳಿ ದರ್ಶನ ಪಡೆದರು.</p>.<p>ಚಿಕ್ಕಪೇಟೆ ಬಡಾವಣೆಯ ದೊಡ್ಡ ರಾಯರಮಠ, ಚಿಕ್ಕ ರಾಯರಮಠ, ಶೆಟ್ಟಿಹಳ್ಳಿಯ ರಾಘವೇಂದ್ರಸ್ವಾಮಿಮಠ, ಹನುಮಂತಪುರದ ರಾಘವೇಂದ್ರ ಸ್ವಾಮಿಮಠ, ಕ್ಯಾತ್ಸಂದ್ರದ ರಾಯರಮಠದಲ್ಲಿ ಭಕ್ತರು ಬೆಳಿಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರು.</p>.<p>ಮಧ್ಯಾಹ್ನ ನಡೆದ ರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ತೀರ್ಥ, ಪ್ರಸಾದ ವ್ಯವಸ್ಥೆಯನ್ನು ಮಠದ ಸೇವಾ ಸಮಿತಿಗಳು ಮಾಡಿದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ತುಮಕೂರು: ರಾಘವೇಂದ್ರಸ್ವಾಮಿಗಳ 348ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಗರದ ವಿವಿಧ ಬಡಾವಣೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ನಡೆಯಿತು.</p>.<p>ಮಹೋತ್ಸವದ ಕೊನೆಯ ದಿನವಾಗಿದ್ದರಿಂದ ಪೂರ್ವಾರಾಧನೆ, ಮಧ್ಯಾರಾಧನೆ ದಿನ ರಾಯರ ದರ್ಶನ ಪಡೆಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಠಗಳಿಗೆ ತೆರಳಿ ದರ್ಶನ ಪಡೆದರು.</p>.<p>ಚಿಕ್ಕಪೇಟೆ ಬಡಾವಣೆಯ ದೊಡ್ಡ ರಾಯರಮಠ, ಚಿಕ್ಕ ರಾಯರಮಠ, ಶೆಟ್ಟಿಹಳ್ಳಿಯ ರಾಘವೇಂದ್ರಸ್ವಾಮಿಮಠ, ಹನುಮಂತಪುರದ ರಾಘವೇಂದ್ರ ಸ್ವಾಮಿಮಠ, ಕ್ಯಾತ್ಸಂದ್ರದ ರಾಯರಮಠದಲ್ಲಿ ಭಕ್ತರು ಬೆಳಿಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರು.</p>.<p>ಮಧ್ಯಾಹ್ನ ನಡೆದ ರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ತೀರ್ಥ, ಪ್ರಸಾದ ವ್ಯವಸ್ಥೆಯನ್ನು ಮಠದ ಸೇವಾ ಸಮಿತಿಗಳು ಮಾಡಿದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>