<p><strong>ಮಧುಗಿರಿ:</strong> ಸಾಹಿತಿ ಕವಿತಾ ಕೃಷ್ಣ ಅವರು 250ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಮುಂದಿನ ಪೀಳಿಗೆಗೆ ಉಪಯುಕ್ತವಾಗಲಿದೆ ಎಂದು ಸಾಹಿತಿ ಮಲನ ಮೂರ್ತಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಕನ್ನಡ ಭವನದಲ್ಲಿ ಶನಿವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನಿಂದ ಸಾಹಿತಿ ಕವಿತಾ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.</p>.<p>ಸಾಹಿತಿ ಕವಿತಾ ಕೃಷ್ಣ ಅವರು ರಚಿಸಿರುವ ಸಾಹಿತ್ಯ ಕೃತಿಗಳು, ಕವಿಯ ಸಾರ್ವಕಾಲಿಕ ಜೀವಂತ ಧ್ವನಿ, ಸಾಮಾಜಿಕ, ಸಾಂಸ್ಕೃತಿಕವಾಗಿ ಆಯಾ ಕಾಲದ ಜನರ ನಾಡಿ ಮಿಡಿತವಾಗಿ ಮತ್ತು ಅಶೋತ್ತರಗಳ ಮಿಡಿತವಾಗಿ ಎಲ್ಲ ಕಾಲದೊಂದಿಗೆ ಸಂವಾದ ಮಾಡುತ್ತಲೇ ಇರುತ್ತವೆ ಎಂದರು.</p>.<p>ತಾಲ್ಲೂಕು ಕಸಾಪ ಅಧ್ಯಕ್ಷೆ ಸಹನಾ ನಾಗೇಶ್, ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ, ನಿರ್ದೇಶಕರಾದ ರಕೀಬ್ ಸಾಬ್, ಎಂ.ವಿ. ಮೂಡ್ಲಿಗಿರೀಶ್, ಶಿವಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ಸಾಹಿತಿ ಕವಿತಾ ಕೃಷ್ಣ ಅವರು 250ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಮುಂದಿನ ಪೀಳಿಗೆಗೆ ಉಪಯುಕ್ತವಾಗಲಿದೆ ಎಂದು ಸಾಹಿತಿ ಮಲನ ಮೂರ್ತಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಕನ್ನಡ ಭವನದಲ್ಲಿ ಶನಿವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನಿಂದ ಸಾಹಿತಿ ಕವಿತಾ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.</p>.<p>ಸಾಹಿತಿ ಕವಿತಾ ಕೃಷ್ಣ ಅವರು ರಚಿಸಿರುವ ಸಾಹಿತ್ಯ ಕೃತಿಗಳು, ಕವಿಯ ಸಾರ್ವಕಾಲಿಕ ಜೀವಂತ ಧ್ವನಿ, ಸಾಮಾಜಿಕ, ಸಾಂಸ್ಕೃತಿಕವಾಗಿ ಆಯಾ ಕಾಲದ ಜನರ ನಾಡಿ ಮಿಡಿತವಾಗಿ ಮತ್ತು ಅಶೋತ್ತರಗಳ ಮಿಡಿತವಾಗಿ ಎಲ್ಲ ಕಾಲದೊಂದಿಗೆ ಸಂವಾದ ಮಾಡುತ್ತಲೇ ಇರುತ್ತವೆ ಎಂದರು.</p>.<p>ತಾಲ್ಲೂಕು ಕಸಾಪ ಅಧ್ಯಕ್ಷೆ ಸಹನಾ ನಾಗೇಶ್, ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ, ನಿರ್ದೇಶಕರಾದ ರಕೀಬ್ ಸಾಬ್, ಎಂ.ವಿ. ಮೂಡ್ಲಿಗಿರೀಶ್, ಶಿವಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>