<p><strong>ಕೊರಟಗೆರೆ</strong>: ಕ್ರಷರ್ ಪ್ರಾರಂಭಿಸುವುದನ್ನು ವಿರೋಧಿಸಿ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಗೆರೆ ಹಾಗೂ ಸುತ್ತಮುತ್ತಲ ಏಳು ಗ್ರಾಮದ ಗ್ರಾಮಸ್ಥರು ತಹಶೀಲ್ದಾರ್ ಕೆ.ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.</p>.<p>ಕ್ರಷರ್ ಪ್ರಾರಂಭಿಸಲು ಉದ್ದೇಶಿಸಿರುವ ಜಾಗ ಗ್ರಾಮಗಳಿಗೆ ಹೊಂದಿಕೊಂಡಂತಿದೆ. ಒಂದು ವೇಳೆ ಕ್ರಷರ್ ಪ್ರಾರಂಭಿಸಿದರೆ ಸುತ್ತಮುತ್ತಲ ಸುಮಾರು 10 ಹಳ್ಳಿಗಳಿಗೆ ತೊಂದರೆಯಾಗುತ್ತದೆ. ಈ ಜಾಗದ ಕೂಗಳತೆ ದೂರದಲ್ಲೇ ದೇವಸ್ಥಾನ, ಶಾಲೆ ಹಾಗೂ ಕುಡಿಯುವ ನೀರಿನ ಕೊಳವೆ ಬಾವಿ ಕೂಡ ಇವೆ. ಈ ಜಾಗದಲ್ಲಿ ಕ್ರಷರ್ ಪ್ರಾರಂಭವಾದರೆ ಸಾರ್ವಜನಿಕ ಬದುಕಿಗೆ ತೊಂದರೆ ಉಂಟಾಗಲಿದೆ ಎಂದು ಮನವಿ ಮಾಡಿದ್ದಾರೆ.</p>.<p>ಕ್ರಷರ್ ಪ್ರಾರಂಭಿಸುವುದನ್ನು ವಿರೋಧಿಸಿ ಈಗಾಗಲೇ ತಹಶೀಲ್ದಾರ್ ಕಚೇರಿಗೆ ಅನೇಕ ಬಾರಿ ಮನವಿ ನೀಡಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲಿಸಿ ನ್ಯಾಯ ಒದಗಿಸುವ ಭರವಸೆ ನೀಡಿದ್ದರು. ಆದರೂ ಮತ್ತೆ ಕಲ್ಲು ಗಣಿಗಾರಿಕೆ ಪ್ರಾರಂಭಿಸಲು ಮುಂದಾಗುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಕಲ್ಲು ಗಣಿಗಾರಿಕೆ ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.</p>.<p>‘ನಿಯೋಜಿತ ಜಾಗದ ಕೂಗಳತೆ ದೂರದಲ್ಲೆ ನಮ್ಮ ಮನೆಗಳಿವೆ. ದನ, ಕರ ಕಟ್ಟಿಕೊಂಡು ಜೀವನ ಮಾಡುತ್ತಿದ್ದೇವೆ. ಸುತ್ತ ಏಳು ಗ್ರಾಮಗಳಿವೆ. ಇದರಿಂದ ನಮ್ಮ ಹಾಗೂ ಮಕ್ಕಳ ಭವಿಷ್ಯಕ್ಕೆ ಕಂಟಕವಾಗಲಿದೆ. ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಕ್ರಷರ್ ಮಾಡಲು ಬಿಡುವುದಿಲ್ಲ. ಒಂದು ವೇಳೆ ಮಾಡಲು ಮುಂದಾದರೆ ನಾವೆಲ್ಲ ವಿಷ ಕುಡಿಯುತ್ತೇವೆ‘ ಎಂದು ಯಾದಗೆರೆ ಗ್ರಾಮಸ್ಥೆ ವರದಮ್ಮ ಎಚ್ಚರಿಸಿದರು.</p>.<p>ಗೋಮಾಳದ ಪಕ್ಕದಲ್ಲಿ ಕ್ರಷರ್ ಮಾಡಲು ಮುಂದಾಗಿದ್ದಾರೆ. ಹತ್ತಾರು ಹಳ್ಳಿಗಳ ಜನರ ಜೀವಕ್ಕೆ ಆಪತ್ತು ಎದುರಾಗಲಿದೆ. ಯಾವುದೇ ಕಾರಣಕ್ಕೂ ಇಲ್ಲಿ ಕ್ರಷರ್ ಮಾಡಲು ಅಧಿಕಾರಿಗಳು ಅನುಮತಿ ನೀಡಬಾರದು ಎಂದು ಗ್ರಾಮದ ಮುನಿಯಪ್ಪ ಒತ್ತಾಯಿಸಿದ್ದಾರೆ.</p>.<p>ಸ್ಥಳಕ್ಕೆ ತಹಶೀಲ್ದಾರ್ ಕೆ.ಮಂಜುನಾಥ್ ಹಾಗೂ ಕಂದಾಯ ಇಲಾಖೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ</strong>: ಕ್ರಷರ್ ಪ್ರಾರಂಭಿಸುವುದನ್ನು ವಿರೋಧಿಸಿ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಗೆರೆ ಹಾಗೂ ಸುತ್ತಮುತ್ತಲ ಏಳು ಗ್ರಾಮದ ಗ್ರಾಮಸ್ಥರು ತಹಶೀಲ್ದಾರ್ ಕೆ.ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.</p>.<p>ಕ್ರಷರ್ ಪ್ರಾರಂಭಿಸಲು ಉದ್ದೇಶಿಸಿರುವ ಜಾಗ ಗ್ರಾಮಗಳಿಗೆ ಹೊಂದಿಕೊಂಡಂತಿದೆ. ಒಂದು ವೇಳೆ ಕ್ರಷರ್ ಪ್ರಾರಂಭಿಸಿದರೆ ಸುತ್ತಮುತ್ತಲ ಸುಮಾರು 10 ಹಳ್ಳಿಗಳಿಗೆ ತೊಂದರೆಯಾಗುತ್ತದೆ. ಈ ಜಾಗದ ಕೂಗಳತೆ ದೂರದಲ್ಲೇ ದೇವಸ್ಥಾನ, ಶಾಲೆ ಹಾಗೂ ಕುಡಿಯುವ ನೀರಿನ ಕೊಳವೆ ಬಾವಿ ಕೂಡ ಇವೆ. ಈ ಜಾಗದಲ್ಲಿ ಕ್ರಷರ್ ಪ್ರಾರಂಭವಾದರೆ ಸಾರ್ವಜನಿಕ ಬದುಕಿಗೆ ತೊಂದರೆ ಉಂಟಾಗಲಿದೆ ಎಂದು ಮನವಿ ಮಾಡಿದ್ದಾರೆ.</p>.<p>ಕ್ರಷರ್ ಪ್ರಾರಂಭಿಸುವುದನ್ನು ವಿರೋಧಿಸಿ ಈಗಾಗಲೇ ತಹಶೀಲ್ದಾರ್ ಕಚೇರಿಗೆ ಅನೇಕ ಬಾರಿ ಮನವಿ ನೀಡಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲಿಸಿ ನ್ಯಾಯ ಒದಗಿಸುವ ಭರವಸೆ ನೀಡಿದ್ದರು. ಆದರೂ ಮತ್ತೆ ಕಲ್ಲು ಗಣಿಗಾರಿಕೆ ಪ್ರಾರಂಭಿಸಲು ಮುಂದಾಗುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಕಲ್ಲು ಗಣಿಗಾರಿಕೆ ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.</p>.<p>‘ನಿಯೋಜಿತ ಜಾಗದ ಕೂಗಳತೆ ದೂರದಲ್ಲೆ ನಮ್ಮ ಮನೆಗಳಿವೆ. ದನ, ಕರ ಕಟ್ಟಿಕೊಂಡು ಜೀವನ ಮಾಡುತ್ತಿದ್ದೇವೆ. ಸುತ್ತ ಏಳು ಗ್ರಾಮಗಳಿವೆ. ಇದರಿಂದ ನಮ್ಮ ಹಾಗೂ ಮಕ್ಕಳ ಭವಿಷ್ಯಕ್ಕೆ ಕಂಟಕವಾಗಲಿದೆ. ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಕ್ರಷರ್ ಮಾಡಲು ಬಿಡುವುದಿಲ್ಲ. ಒಂದು ವೇಳೆ ಮಾಡಲು ಮುಂದಾದರೆ ನಾವೆಲ್ಲ ವಿಷ ಕುಡಿಯುತ್ತೇವೆ‘ ಎಂದು ಯಾದಗೆರೆ ಗ್ರಾಮಸ್ಥೆ ವರದಮ್ಮ ಎಚ್ಚರಿಸಿದರು.</p>.<p>ಗೋಮಾಳದ ಪಕ್ಕದಲ್ಲಿ ಕ್ರಷರ್ ಮಾಡಲು ಮುಂದಾಗಿದ್ದಾರೆ. ಹತ್ತಾರು ಹಳ್ಳಿಗಳ ಜನರ ಜೀವಕ್ಕೆ ಆಪತ್ತು ಎದುರಾಗಲಿದೆ. ಯಾವುದೇ ಕಾರಣಕ್ಕೂ ಇಲ್ಲಿ ಕ್ರಷರ್ ಮಾಡಲು ಅಧಿಕಾರಿಗಳು ಅನುಮತಿ ನೀಡಬಾರದು ಎಂದು ಗ್ರಾಮದ ಮುನಿಯಪ್ಪ ಒತ್ತಾಯಿಸಿದ್ದಾರೆ.</p>.<p>ಸ್ಥಳಕ್ಕೆ ತಹಶೀಲ್ದಾರ್ ಕೆ.ಮಂಜುನಾಥ್ ಹಾಗೂ ಕಂದಾಯ ಇಲಾಖೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>