ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಯಾದವ ಸಮಾಜದವರು ನಿರ್ಣಾಯಕರಾಗಿದ್ದಾರೆ. ಜನಾಂಗದ ಭಾವನೆಗಳನ್ನು ಗೌರವಿಸಿ ಎರಡೂ ಪಕ್ಷಗಳ ನಾಯಕರು ಸೂಕ್ತ ತೀರ್ಮಾನ ಕೈಗೊಳ್ಳಬೇಕು. ನಿರ್ಲಕ್ಷ್ಯ ಭಾವನೆ ಮುಂದುವರಿಸಿದರೆ ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಯಾವ ಪಕ್ಷವನ್ನೂ ಬೆಂಬಲಿಸದೆ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.