ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯರಮಲ್ಲೇನಹಳ್ಳಿ: ರೈತನ ಮೇಲೆ ಕರಡಿ ದಾಳಿ

Last Updated 28 ಸೆಪ್ಟೆಂಬರ್ 2022, 5:12 IST
ಅಕ್ಷರ ಗಾತ್ರ

ಮಧುಗಿರಿ: ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಮಂಗಳವಾರ ಬೆಳಿಗ್ಗೆ ತಾಲ್ಲೂಕಿನ ಯರಮಲ್ಲೇನಹಳ್ಳಿಯಲ್ಲಿ ನಡೆದಿದೆ.

ಐ.ಡಿ. ಹಳ್ಳಿ ಹೋಬಳಿ ಯರಮಲ್ಲೇನಹಳ್ಳಿಯ ಶ್ರೀರಾಮರೆಡ್ಡಿ (45) ಗಾಯಗೊಂಡಿದ್ದಾರೆ.

ಬೆಳಿಗ್ಗೆ ಮೇವು ತರಲು ಹೋಗಿದ್ದ ಸಮಯದಲ್ಲಿ ಕರಡಿ ದಾಳಿ ನಡೆಸಿ ಕೈಗೆ ಗಾಯಗೊಳಿಸಿದೆ. ಚೀರಾಟ ಕೇಳಿಸಿಕೊಂಡ ಅಕ್ಕಪಕ್ಕದ ರೈತರು ಸ್ಥಳಕ್ಕೆ ಬಂದು ಕರಡಿಯನ್ನು ಓಡಿಸಿ ಗಾಯಾಳುವನ್ನು ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ರವಿ ಆಸ್ಪತ್ರೆಗೆ ಭೇಟಿ ನೀಡಿ
ಪರಿಶೀಲಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT