ಬೆಳಿಗ್ಗೆ ಮೇವು ತರಲು ಹೋಗಿದ್ದ ಸಮಯದಲ್ಲಿ ಕರಡಿ ದಾಳಿ ನಡೆಸಿ ಕೈಗೆ ಗಾಯಗೊಳಿಸಿದೆ. ಚೀರಾಟ ಕೇಳಿಸಿಕೊಂಡ ಅಕ್ಕಪಕ್ಕದ ರೈತರು ಸ್ಥಳಕ್ಕೆ ಬಂದು ಕರಡಿಯನ್ನು ಓಡಿಸಿ ಗಾಯಾಳುವನ್ನು ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.
ವಲಯ ಅರಣ್ಯಾಧಿಕಾರಿ ರವಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.