ಈ ಬಾರಿ ಲಾಕ್ಡೌನ್ ಇದ್ದುದರಿಂದ ಹೆಚ್ಚಿನ ಸಂಖ್ಯೆಯ ರೈತರು ಪೂರ್ವ ಮುಂಗಾರು ಬಿತ್ತನೆಗೆ ಒಲವು ತೋರಿದ್ದು, ಶೇ 94ರಷ್ಟು ಬಿತ್ತನೆಯಾಗಿದೆ. ಬಾಣಸಂದ್ರ, ಕೊಂಡಜ್ಜಿ, ಗೊಪ್ಪೇನಹಳ್ಳಿ, ದುಂಡಾ, ಕುರುಬರಹಳ್ಳಿ ಬ್ಯಾಲ, ತಾಳಕೆರೆ, ಕಲ್ಕೆರೆ, ಎ.ಹೊಸಹಳ್ಳಿ, ಹುಲ್ಲೇಕೆರೆ, ಸಾರಿಗೇಹಳ್ಳಿ, ಮಾಯಸಂದ್ರ,ಕಸಬಾ, ದಂಡಿನಶಿವರ ಮತ್ತು ದಬ್ಬೇಘಟ್ಟ ಹೋಬಳಿಯ ಕೆಲವು ಭಾಗದಲ್ಲಿ ಹಳದಿ ರೋಗ ಕಾಣಿಸಿಕೊಂಡಿದೆ.