ಇರಾನ್, ದುಬೈ, ಬೆಹರೇನ್, ಸೌದಿ ಅರೇಬಿಯಾದಲ್ಲಿ ಕರ್ನಾಟಕದ ಶಾಸಕರು, ವ್ಯಾಪಾರಸ್ಥರು ಸೇರಿ ಪ್ರವಾಸಿಗರು ಸಿಲುಕಿದ್ದಾರೆ. ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ವಿದೇಶ ಸಚಿವ ಜೈಶಂಕರ್ ವಿಶೇಷ ನಿಯೋಗದ ಮೂಲಕ ಭಾರತೀಯರ ರಕ್ಷಣೆಗೆ ವಿದೇಶಿ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.