<p><strong>ಮಧುಗಿರಿ</strong>: ಕೈವಾರ ಯೋಗಿ ನಾರೇಯಣ ಜಯಂತಿಯನ್ನು ಮಾರ್ಚ್ 7ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ತಾಲ್ಲೂಕು ಬಲಿಜ ಸಂಘದ ಅಧ್ಯಕ್ಷ ಎಂ.ಎಸ್. ಶಂಕರನಾರಾಯಣ<br />ತಿಳಿಸಿದರು.</p>.<p>ಪಟ್ಟಣದ ಎಂ.ಎಸ್. ರಾಮಯ್ಯ ಸಮುದಾಯ ಭವನದಲ್ಲಿ ತಾಲ್ಲೂಕು ಬಲಿಜ ಸಂಘದಿಂದ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>7ರಂದು ಬೆಳಿಗ್ಗೆ 10.30ಕ್ಕೆ ಕೈವಾರ ಯೋಗಿ ನಾರೇಯಣ ತಾತಯ್ಯ ಭಾವಚಿತ್ರದೊಂದಿಗೆ ಮಲ್ಲೇಶ್ವರ ಸ್ವಾಮಿ ದೇವಾಲಯ ಮುಂಭಾಗದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೂರ್ಣಕುಂಭ, ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಸಲಾಗುವುದು ಎಂದರು.</p>.<p>ಎಂ.ಎಸ್. ರಾಮಯ್ಯ ಭವನದಲ್ಲಿ ಕೈವಾರ ತಾತಯ್ಯ ಕೀರ್ತನೆ, ತಾಲ್ಲೂಕಿನ ಬಲಿಜ ಸಮುದಾಯದ ಎಸ್ಸೆಸ್ಸೆಲ್ಸಿ, ಪಿಯು ಹಾಗೂ ಉನ್ನತ ಶಿಕ್ಷಣದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿ<br />ದರು.</p>.<p>ತಾಲ್ಲೂಕು ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ವೆಂಕಟರಾಮು, ಖಜಾಂಚಿ ಆರ್.ಎಲ್.ಎಸ್. ರಮೇಶ್, ಮುಖಂಡರಾದ ವೇಣುಗೋಪಾಲ್, ಶ್ರೀನಿವಾಸ್, ಲಕ್ಷ್ಮೀನಾರಾಯಣ, ಎಂ.ಎಸ್.ಆರ್.ಬಿ. ಕುಮಾರ್, ಸೀಬಿ ನರಸಿಂಹಯ್ಯ, ಚಲಪತಿ, ರಾಘವೇಂದ್ರ, ನಾರಾಯಣಪ್ಪ, ಹರಿಹರಮೂರ್ತಿ, ದೋಲಿ ಬಾಬು, ನರಸಿಂಹಮೂರ್ತಿ ಹಾಗೂ ಸಮುದಾಯದ ಮಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ಕೈವಾರ ಯೋಗಿ ನಾರೇಯಣ ಜಯಂತಿಯನ್ನು ಮಾರ್ಚ್ 7ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ತಾಲ್ಲೂಕು ಬಲಿಜ ಸಂಘದ ಅಧ್ಯಕ್ಷ ಎಂ.ಎಸ್. ಶಂಕರನಾರಾಯಣ<br />ತಿಳಿಸಿದರು.</p>.<p>ಪಟ್ಟಣದ ಎಂ.ಎಸ್. ರಾಮಯ್ಯ ಸಮುದಾಯ ಭವನದಲ್ಲಿ ತಾಲ್ಲೂಕು ಬಲಿಜ ಸಂಘದಿಂದ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>7ರಂದು ಬೆಳಿಗ್ಗೆ 10.30ಕ್ಕೆ ಕೈವಾರ ಯೋಗಿ ನಾರೇಯಣ ತಾತಯ್ಯ ಭಾವಚಿತ್ರದೊಂದಿಗೆ ಮಲ್ಲೇಶ್ವರ ಸ್ವಾಮಿ ದೇವಾಲಯ ಮುಂಭಾಗದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೂರ್ಣಕುಂಭ, ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಸಲಾಗುವುದು ಎಂದರು.</p>.<p>ಎಂ.ಎಸ್. ರಾಮಯ್ಯ ಭವನದಲ್ಲಿ ಕೈವಾರ ತಾತಯ್ಯ ಕೀರ್ತನೆ, ತಾಲ್ಲೂಕಿನ ಬಲಿಜ ಸಮುದಾಯದ ಎಸ್ಸೆಸ್ಸೆಲ್ಸಿ, ಪಿಯು ಹಾಗೂ ಉನ್ನತ ಶಿಕ್ಷಣದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿ<br />ದರು.</p>.<p>ತಾಲ್ಲೂಕು ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ವೆಂಕಟರಾಮು, ಖಜಾಂಚಿ ಆರ್.ಎಲ್.ಎಸ್. ರಮೇಶ್, ಮುಖಂಡರಾದ ವೇಣುಗೋಪಾಲ್, ಶ್ರೀನಿವಾಸ್, ಲಕ್ಷ್ಮೀನಾರಾಯಣ, ಎಂ.ಎಸ್.ಆರ್.ಬಿ. ಕುಮಾರ್, ಸೀಬಿ ನರಸಿಂಹಯ್ಯ, ಚಲಪತಿ, ರಾಘವೇಂದ್ರ, ನಾರಾಯಣಪ್ಪ, ಹರಿಹರಮೂರ್ತಿ, ದೋಲಿ ಬಾಬು, ನರಸಿಂಹಮೂರ್ತಿ ಹಾಗೂ ಸಮುದಾಯದ ಮಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>