<p><strong>ತುರುವೇಕೆರೆ:</strong> ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಸೋಪನಹಳ್ಳಿ ಗ್ರಾಮದದೇವಿಕಾ (17) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ದೇವಿಕಾ ತುಮಕೂರಿನ ಸಿದ್ದಗಂಗಾ ಕಾಲೇಜಿನ ದ್ವಿತೀಯ ಪಿಯುಸಿ ಓದುತ್ತಿದ್ದರು. ಸದ್ಯ ಕಾಲೇಜಿಗೆ ರಜೆ ಇರುವುದರಿಂದ ಮನೆಯಲ್ಲಿ ಇದ್ದರು.</p>.<p>ಗ್ರಾಮದಲ್ಲಿ ತಂದೆ ಹಾಗೂ ದಾಯಾದಿಗಳ ನಡುವೆ ಜಮೀನು ವಿಚಾರವಾಗಿ ಕೆಲ ದಿನಗಳಿಂದ ಗಲಾಟೆ ನಡೆದಿತ್ತು. ಈ ಬಗ್ಗೆ ದೇವಿಕಾಳ ಪೋಷಕರು ಪಟ್ಟಣದ ಠಾಣೆಗೆ ದೂರು ನೀಡಲು ತೆರಳಿದ್ದ ವೇಳೆ ದೇವಿಕಾ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪಟ್ಟಣದ ಪೊಲೀಸರು ತಿಳಿಸಿದರು.</p>.<p>ಜಮೀನು ಗಲಾಟೆ ವಿಷಯವಾಗಿ ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಕೈಗೊಂಡಿಲ್ಲ. ಪೊಲೀಸರು ಸಕಾಲಕ್ಕೆ ಗಲಾಟೆ ಇತ್ಯರ್ಥ ಮಾಡಿದ್ದರೆ, ಮಗಳು ಹೀಗೆ ಸಾಯುತ್ತಿರಲಿಲ್ಲ ಎಂದು ದೇವಿಕಾ ಪೋಷಕರು ಆರೋಪಿಸಿದ್ದಾರೆ.</p>.<p>ಪ್ರಕರಣ ಸಂಬಂಧ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಸೋಪನಹಳ್ಳಿ ಗ್ರಾಮದದೇವಿಕಾ (17) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ದೇವಿಕಾ ತುಮಕೂರಿನ ಸಿದ್ದಗಂಗಾ ಕಾಲೇಜಿನ ದ್ವಿತೀಯ ಪಿಯುಸಿ ಓದುತ್ತಿದ್ದರು. ಸದ್ಯ ಕಾಲೇಜಿಗೆ ರಜೆ ಇರುವುದರಿಂದ ಮನೆಯಲ್ಲಿ ಇದ್ದರು.</p>.<p>ಗ್ರಾಮದಲ್ಲಿ ತಂದೆ ಹಾಗೂ ದಾಯಾದಿಗಳ ನಡುವೆ ಜಮೀನು ವಿಚಾರವಾಗಿ ಕೆಲ ದಿನಗಳಿಂದ ಗಲಾಟೆ ನಡೆದಿತ್ತು. ಈ ಬಗ್ಗೆ ದೇವಿಕಾಳ ಪೋಷಕರು ಪಟ್ಟಣದ ಠಾಣೆಗೆ ದೂರು ನೀಡಲು ತೆರಳಿದ್ದ ವೇಳೆ ದೇವಿಕಾ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪಟ್ಟಣದ ಪೊಲೀಸರು ತಿಳಿಸಿದರು.</p>.<p>ಜಮೀನು ಗಲಾಟೆ ವಿಷಯವಾಗಿ ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಕೈಗೊಂಡಿಲ್ಲ. ಪೊಲೀಸರು ಸಕಾಲಕ್ಕೆ ಗಲಾಟೆ ಇತ್ಯರ್ಥ ಮಾಡಿದ್ದರೆ, ಮಗಳು ಹೀಗೆ ಸಾಯುತ್ತಿರಲಿಲ್ಲ ಎಂದು ದೇವಿಕಾ ಪೋಷಕರು ಆರೋಪಿಸಿದ್ದಾರೆ.</p>.<p>ಪ್ರಕರಣ ಸಂಬಂಧ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>