ಆಸ್ಪತ್ರೆ ಪೀಠೋಪಕರಣ ದ್ವಂಸ: ‘ಯುವತಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ಸಾವು ಸಂಭವಿಸುತ್ತಿರಲಿಲ್ಲ. ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದಿರುವುದರಿಂದ ಸಾವು ಸಂಭವಿಸಿದೆ. ಇದಕ್ಕೆಲ್ಲ ಆರೋಗ್ಯ ಇಲಾಖೆಯವರೇ ಹೊಣೆ’ ಎಂದು ಯುವತಿಯ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ಪೀಠೋಪಕರಣಗಳನ್ನು ದ್ವಂಸ ಮಾಡಿದರು.