<p><strong>ಹುಳಿಯಾರು: </strong>ಸಮೀಪದ ಮತಿಘಟ್ಟ ಗ್ರಾಮದ ಗಾಂಧಿನಗರದ ಬಳಿ ಸೋಮವಾರ ರಸ್ತೆ ಅಪಘಾತದಲ್ಲಿ ಬಿಳಗಿಹಳ್ಳಿಯ ಯುವತಿ ಸೌಮ್ಯಾ (23) ಮೃತಪಟ್ಟಿದ್ದಾರೆ.</p>.<p>ದ್ವಿಚಕ್ರ ವಾಹನದಲ್ಲಿ ತಿಪಟೂರಿನಿಂದ ಸ್ವಗ್ರಾಮಕ್ಕೆ ಹಿಂದಿರುವಾಗ ತಿಪಟೂರು- ಹುಳಿಯಾರು ಮುಖ್ಯರಸ್ತೆಯ ಗಾಂಧಿನಗರದ ಬಳಿ ಅಪರಿಚಿತ ವಾಹನಕ್ಕೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾರೆ. ದಾರಿಹೋಕರು ಕೂಡಲೇ ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು. ಆಸ್ಪತ್ರೆ ಸಿಬ್ಬಂದಿ ಮೃತಪಟ್ಟಿರುವುದನ್ನು ದೃಢಪಡಿಸಿದರು.</p>.<p>ಇದೇ 5ರಂದು ಯುವತಿಯ ಮದುವೆ ನಿಶ್ಚಯವಾಗಿತ್ತು. ಸ್ಥಳಕ್ಕೆ ಹಂದನಕೆರೆ ಪಿಎಸ್ಐ ಯೋಗೀಶ್ ಭೇಟಿ ನೀಡಿದ್ದರು.</p>.<p class="Subhead"><strong>ಆಸ್ಪತ್ರೆ ಪೀಠೋಪಕರಣ ದ್ವಂಸ:</strong> ‘ಯುವತಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ಸಾವು ಸಂಭವಿಸುತ್ತಿರಲಿಲ್ಲ. ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದಿರುವುದರಿಂದ ಸಾವು ಸಂಭವಿಸಿದೆ. ಇದಕ್ಕೆಲ್ಲ ಆರೋಗ್ಯ ಇಲಾಖೆಯವರೇ ಹೊಣೆ’ ಎಂದು ಯುವತಿಯ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ಪೀಠೋಪಕರಣಗಳನ್ನು ದ್ವಂಸ ಮಾಡಿದರು.</p>.<p>ಸ್ಥಳಕ್ಕೆ ಬಂದ ಪ್ರಭಾರ ವೈದ್ಯೆ ಹಿಮಶ್ವೇತಾ ಆಸ್ಪತ್ರೆಯ ಸಿಸಿಟಿವಿಫುಟೇಜ್ಗಳನ್ನು ಆಧರಿಸಿ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು: </strong>ಸಮೀಪದ ಮತಿಘಟ್ಟ ಗ್ರಾಮದ ಗಾಂಧಿನಗರದ ಬಳಿ ಸೋಮವಾರ ರಸ್ತೆ ಅಪಘಾತದಲ್ಲಿ ಬಿಳಗಿಹಳ್ಳಿಯ ಯುವತಿ ಸೌಮ್ಯಾ (23) ಮೃತಪಟ್ಟಿದ್ದಾರೆ.</p>.<p>ದ್ವಿಚಕ್ರ ವಾಹನದಲ್ಲಿ ತಿಪಟೂರಿನಿಂದ ಸ್ವಗ್ರಾಮಕ್ಕೆ ಹಿಂದಿರುವಾಗ ತಿಪಟೂರು- ಹುಳಿಯಾರು ಮುಖ್ಯರಸ್ತೆಯ ಗಾಂಧಿನಗರದ ಬಳಿ ಅಪರಿಚಿತ ವಾಹನಕ್ಕೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾರೆ. ದಾರಿಹೋಕರು ಕೂಡಲೇ ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು. ಆಸ್ಪತ್ರೆ ಸಿಬ್ಬಂದಿ ಮೃತಪಟ್ಟಿರುವುದನ್ನು ದೃಢಪಡಿಸಿದರು.</p>.<p>ಇದೇ 5ರಂದು ಯುವತಿಯ ಮದುವೆ ನಿಶ್ಚಯವಾಗಿತ್ತು. ಸ್ಥಳಕ್ಕೆ ಹಂದನಕೆರೆ ಪಿಎಸ್ಐ ಯೋಗೀಶ್ ಭೇಟಿ ನೀಡಿದ್ದರು.</p>.<p class="Subhead"><strong>ಆಸ್ಪತ್ರೆ ಪೀಠೋಪಕರಣ ದ್ವಂಸ:</strong> ‘ಯುವತಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ಸಾವು ಸಂಭವಿಸುತ್ತಿರಲಿಲ್ಲ. ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದಿರುವುದರಿಂದ ಸಾವು ಸಂಭವಿಸಿದೆ. ಇದಕ್ಕೆಲ್ಲ ಆರೋಗ್ಯ ಇಲಾಖೆಯವರೇ ಹೊಣೆ’ ಎಂದು ಯುವತಿಯ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ಪೀಠೋಪಕರಣಗಳನ್ನು ದ್ವಂಸ ಮಾಡಿದರು.</p>.<p>ಸ್ಥಳಕ್ಕೆ ಬಂದ ಪ್ರಭಾರ ವೈದ್ಯೆ ಹಿಮಶ್ವೇತಾ ಆಸ್ಪತ್ರೆಯ ಸಿಸಿಟಿವಿಫುಟೇಜ್ಗಳನ್ನು ಆಧರಿಸಿ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>