ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ತೆಲುಗು ಭಾಷಿಕರು ಇದ್ದಾರೆ. ‘ಬಿಜೆಪಿ ಸೋಲಿಸಿ, ಮೋದಿಗೆ ಪಾಠ ಕಲಿಸಿ’ ಎಂದು ಎಲ್ಲ ಜಿಲ್ಲೆಗಳಲ್ಲೂ ಓಡಾಡಿ, ಪ್ರಚಾರ ಮಾಡಲು ಆಂಧ್ರದ 20ಕ್ಕೂ ಹೆಚ್ಚು ನಾಯಕರು ರಾಜ್ಯದಲ್ಲಿ ಬೀಡು ಬಿಡಲಿದ್ದಾರೆ ಎಂದು ತಿಳಿಸಿದರು.