ತುಮಕೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಸಚಿನ್ (21) ಮೃತಪಟ್ಟ ಘಟನೆ ನಗರದ ಹನುಮಂತಪುರ ಸೇತುವೆ ಬಳಿ ಗುರುವಾರ ಮಧ್ಯರಾತ್ರಿ ನಡೆದಿದೆ.
ಗಾಯಗೊಂಡಿರುವ ಬೈಕ್ ಸವಾರ ಮಲ್ಲಿಕಾರ್ಜುನ್ (24) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಚಿನ್ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಹೋಬಳಿಯ ಶಂಕರಿಕೊಪ್ಪದ ನಿವಾಸಿ, ಬೈಕ್ ಸವಾರ ಮಲ್ಲಿಕಾರ್ಜುನ್ ಬೊಮ್ಮನಹಳ್ಳಿ ಹೋಬಳಿಯ ಹಾಡೂರು ಗ್ರಾಮದವರು. ಬೆಂಗಳೂರಿನಿಂದ ಶಿರಾ ಕಡೆಗೆ ಪಲ್ಸರ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.