<p><strong>ಕುಣಿಗಲ್ (ತುಮಕೂರು):</strong> ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇರೆಗೆ ಇಬ್ಬರು ಯೂ ಟ್ಯೂಬ್ ವಾಹಿನಿಯ ಪತ್ರಕರ್ತರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ನಗರದ ಯೂಟ್ಯೂಬ್ ವಾಹಿನಿ ಮಾಲೀಕ ಶಬ್ಬೀರ್, ವ್ಯವಸ್ಥಾಪಕ ನಿರ್ದೇಶಕಿ ಕುಸುಮಾ ಎಂಬುವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ನಾಗೇಗೌಡನಪಾಳ್ಯದ ತಾಜ್ ರೆಸ್ಟೋರೆಂಟ್ ಮಾಲೀಕ ಜಿಯಾವುಲ್ಲಾ ಎಂ.ಶೇಖ್ ನೀಡಿದ ದೂರಿನ ಮೇರೆಗೆ ಅಮೃತೂರು ಠಾಣೆಯಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿತ್ತು. </p>.<p>‘ಮೇ 24ರಂದು ಒಬ್ಬ ಮಹಿಳೆ, ಮೂವರು ಪುರುಷರು ಹೋಟೆಲ್ನಲ್ಲಿ ಊಟ ಮಾಡಿ ಹೋಗಿದ್ದರು. ಅವರಿಗೆ ನೀಡಿದ್ದ ಊಟವನ್ನು ವಿಡಿಯೊ ಮಾಡಿಕೊಂಡಿದ್ದರು. 3 ದಿನದ ನಂತರ ಕುಸುಮಾ ಎಂಬುವರು ನನ್ನ ಜತೆ ಮೊಬೈಲ್ನಲ್ಲಿ ಮಾತನಾಡಿದ್ದರು’ ಎಂದು ಜಿಯಾವುಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ನಿಮ್ಮ ಹೋಟೆಲ್ನಲ್ಲಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದೀರಿ, ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಎಲ್ಲ ವಿಡಿಯೊ ನನ್ನ ಬಳಿ ಇವೆ. ಸುದ್ದಿ ಪ್ರಕಟಿಸದಿರಲು ಕಮರ್ಷಿಯಲ್ ನೀಡಬೇಕು’ ಎಂದು ಕುಸುಮಾ ಬೇಡಿಕೆ ಇಟ್ಟಿದ್ದರು ಎಂದು ದೂರು ನೀಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್ (ತುಮಕೂರು):</strong> ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇರೆಗೆ ಇಬ್ಬರು ಯೂ ಟ್ಯೂಬ್ ವಾಹಿನಿಯ ಪತ್ರಕರ್ತರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ನಗರದ ಯೂಟ್ಯೂಬ್ ವಾಹಿನಿ ಮಾಲೀಕ ಶಬ್ಬೀರ್, ವ್ಯವಸ್ಥಾಪಕ ನಿರ್ದೇಶಕಿ ಕುಸುಮಾ ಎಂಬುವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ನಾಗೇಗೌಡನಪಾಳ್ಯದ ತಾಜ್ ರೆಸ್ಟೋರೆಂಟ್ ಮಾಲೀಕ ಜಿಯಾವುಲ್ಲಾ ಎಂ.ಶೇಖ್ ನೀಡಿದ ದೂರಿನ ಮೇರೆಗೆ ಅಮೃತೂರು ಠಾಣೆಯಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿತ್ತು. </p>.<p>‘ಮೇ 24ರಂದು ಒಬ್ಬ ಮಹಿಳೆ, ಮೂವರು ಪುರುಷರು ಹೋಟೆಲ್ನಲ್ಲಿ ಊಟ ಮಾಡಿ ಹೋಗಿದ್ದರು. ಅವರಿಗೆ ನೀಡಿದ್ದ ಊಟವನ್ನು ವಿಡಿಯೊ ಮಾಡಿಕೊಂಡಿದ್ದರು. 3 ದಿನದ ನಂತರ ಕುಸುಮಾ ಎಂಬುವರು ನನ್ನ ಜತೆ ಮೊಬೈಲ್ನಲ್ಲಿ ಮಾತನಾಡಿದ್ದರು’ ಎಂದು ಜಿಯಾವುಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ನಿಮ್ಮ ಹೋಟೆಲ್ನಲ್ಲಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದೀರಿ, ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಎಲ್ಲ ವಿಡಿಯೊ ನನ್ನ ಬಳಿ ಇವೆ. ಸುದ್ದಿ ಪ್ರಕಟಿಸದಿರಲು ಕಮರ್ಷಿಯಲ್ ನೀಡಬೇಕು’ ಎಂದು ಕುಸುಮಾ ಬೇಡಿಕೆ ಇಟ್ಟಿದ್ದರು ಎಂದು ದೂರು ನೀಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>