ಇನ್ನೂ ತರಕಾರಿ ಸಂತೆಯಲ್ಲಿಯೂ ಜನರು ತುಂಬಿದ್ದರು. ಸಂತೆಯಲ್ಲಿ ಅಲ್ಲಲ್ಲಿ ರೆಡಿಮೆಡ್ ಅಂಗಡಿಗಳು ಸಹ ತಲೆ ಎತ್ತಿದ್ದವು. ಎಲ್ಲ ಕಡೆ ಜನರು ಅಗತ್ಯ ಪರಿಕರ ಕೊಳ್ಳಲು ಮುಗಿಬಿದ್ದಿದ್ದರು. ಬೆಲ್ಲ, ಕಡ್ಲೆ ಸೇರಿದಂತೆ ದಿನಸಿ ಪಾದಾರ್ಥಗಳ ಬೆಲೆ ಗಗನ ಮುಟ್ಟಿದ್ದರೂ ಜನರು ಬರ ಲೆಕ್ಕಿಸದೆ ಅಗತ್ಯಕ್ಕೆ ತಕ್ಕಷ್ಟು ಕೊಂಡು ಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹೂವಿನ ಬೆಲೆಯಲ್ಲಿ ಏರಿಕೆಯಾಗಿದ್ದರೆ ಬಾಳೆಹಣ್ಣು ಬೆಲೆಯಲ್ಲಿ ಅಷ್ಟೇನು ಬೆಲೆ ಏರಿಕೆ ಕಂಡು ಬರಲಿಲ್ಲ.