<p><strong>ಮಧುಗಿರಿ</strong>: ಖಾಸಗಿ ವಾಹಿನಿ ಝೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಮಂಜಮ್ಮ (30) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು.</p>.<p>ತಾಲ್ಲೂಕಿನ ಡಿ.ವಿ.ಹಳ್ಳಿ ಗ್ರಾಮದ ನಿವಾಸಿ ಅಂಧರಾಗಿದ್ದ ಮಂಜಮ್ಮ ಕಿಡ್ನಿ ವೈಫಲ್ಯದಿಂದಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ಮಂಗಳವಾರ ಮಧ್ಯಾಹ್ನ ಕುಟುಂಬ ಹಾಗೂ ಗ್ರಾಮಸ್ಥರು ಸೇರಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದರು.</p>.<p>ಖಾಸಗಿ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪಾರ ಜನಮನ್ನಣೆ ಗಳಿಸಿದ್ದರು. ಅವರು ಈ ಹಿಂದೆ ಪಟ್ಟಣದ ದಂಡಿನ ಮಾರಮ್ಮ ದೇವಾಲಯದ ಮುಂಭಾಗದಲ್ಲಿ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಹಾಡು ಹೇಳುತ್ತಿದ್ದರು. ಅದರಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದರು.</p>.<p>ದೇವಾಲಯದ ಮುಂದೆ ಹಾಡು ಹೇಳುತ್ತಿದ್ದುದನ್ನು ಗಮನಿಸಿದ ಖಾಸಗಿ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಅದ್ಭುತವಾಗಿ ಹಾಡಿ ಜನಮನ ಗೆದ್ದಿದ್ದರು. ನಟ ಜಗ್ಗೇಶ್ ಹಾಗೂ ಅವರ ಅಭಿಮಾನಿಗಳು ನೂತನವಾಗಿ ಮನೆ ನಿರ್ಮಿಸಿ ಜಗ್ಗೇಶ್-ಪರಿಮಳ ನಿಲಯ ಎಂದು ಹೆಸರು ಇಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ಖಾಸಗಿ ವಾಹಿನಿ ಝೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಮಂಜಮ್ಮ (30) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು.</p>.<p>ತಾಲ್ಲೂಕಿನ ಡಿ.ವಿ.ಹಳ್ಳಿ ಗ್ರಾಮದ ನಿವಾಸಿ ಅಂಧರಾಗಿದ್ದ ಮಂಜಮ್ಮ ಕಿಡ್ನಿ ವೈಫಲ್ಯದಿಂದಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ಮಂಗಳವಾರ ಮಧ್ಯಾಹ್ನ ಕುಟುಂಬ ಹಾಗೂ ಗ್ರಾಮಸ್ಥರು ಸೇರಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದರು.</p>.<p>ಖಾಸಗಿ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪಾರ ಜನಮನ್ನಣೆ ಗಳಿಸಿದ್ದರು. ಅವರು ಈ ಹಿಂದೆ ಪಟ್ಟಣದ ದಂಡಿನ ಮಾರಮ್ಮ ದೇವಾಲಯದ ಮುಂಭಾಗದಲ್ಲಿ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಹಾಡು ಹೇಳುತ್ತಿದ್ದರು. ಅದರಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದರು.</p>.<p>ದೇವಾಲಯದ ಮುಂದೆ ಹಾಡು ಹೇಳುತ್ತಿದ್ದುದನ್ನು ಗಮನಿಸಿದ ಖಾಸಗಿ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಅದ್ಭುತವಾಗಿ ಹಾಡಿ ಜನಮನ ಗೆದ್ದಿದ್ದರು. ನಟ ಜಗ್ಗೇಶ್ ಹಾಗೂ ಅವರ ಅಭಿಮಾನಿಗಳು ನೂತನವಾಗಿ ಮನೆ ನಿರ್ಮಿಸಿ ಜಗ್ಗೇಶ್-ಪರಿಮಳ ನಿಲಯ ಎಂದು ಹೆಸರು ಇಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>