<p><strong>ಗುಬ್ಬಿ</strong>: ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಪಿಡಿಒ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಬುಧವಾರ ಪಂಚಾಯತ್ ರಾಜ್ ಇಲಾಖೆಯಿಂದ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡುತ್ತಿರುವಾಗ ಹಲವು ಸದಸ್ಯರು ವೇದಿಕೆ ಮುಂಭಾಗ ಬಂದು ಜಿಲ್ಲಾ ಪಂಚಾಯಿತಿ ಸಿಇಒ ಕಾರ್ಯಕ್ರಮಕ್ಕೆ ಬರದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. </p>.<p>ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ತರಬೇತಿ ಉತ್ತಮವಾಗಿದ್ದರೂ, ಅಧಿಕಾರ ಅವಧಿ ಮುಗಿಯುವ ಈ ಸಂದರ್ಭದಲ್ಲಿ ತರಬೇತಿಯ ಅಗತ್ಯ ಏನಿತ್ತು ಎಂದು ಅನೇಕರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಸದಸ್ಯರನ್ನು ಸಮಾಧಾನ ಪಡಿಸಿ ಮಾತನಾಡಿದ ಶಾಸಕ ಶ್ರೀನಿವಾಸ್, ಅಧಿಕಾರ ಮುಗಿಯುತ್ತಿರುವ ಸಂದರ್ಭದಲ್ಲಿ ಯಾವುದೇ ತರಬೇತಿ ನೀಡಿದರೂ ಪ್ರಯೋಜನವಾಗುವುದಿಲ್ಲ. ಅಧಿಕಾರಿಗಳು ಯಾವ ಕಾರಣಕ್ಕೆ ಈ ಕಾರ್ಯಕ್ರಮ ಆಯೋಜಿಸಿದರು ಎಂದು ತಿಳಿಯುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳನ್ನು ವಿಚಾರಿಸಿ ಪರಿಶೀಲಿಸೋಣ ಎಂದರು.</p>.<p>ತರಬೇತಿ ಕಾರ್ಯಗಾರಗಳನ್ನು ಪಂಚಾಯಿತಿ ಸದಸ್ಯರು ಆಯ್ಕೆಯಾದ ಪ್ರಾರಂಭದಲ್ಲಿ ಮಾಡಿದರೆ ಅನುಕೂಲವಾಗುವುದು. ಆದರೆ ಅಂತಿಮ ದಿನಗಳಲ್ಲಿ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಗ್ರಾಮೀಣ ಭಾಗದಲ್ಲಿ ವಸತಿ ರಹಿತರಿಗೆ ಅಗತ್ಯ ವಸತಿಯನ್ನು ಒದಗಿಸಲು ಸಾಧ್ಯವಾಗದಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಸಹಜ. ಈಗಾಗಲೇ ಸಂಬಂಧಿಸಿದ ಸಚಿವರ ಜೊತೆ ಚರ್ಚಿಸಿ ತಾಲ್ಲೂಕಿಗೆ ಅಗತ್ಯವಿರುವಷ್ಟು ವಸತಿಗಳನ್ನು ಒದಗಿಸುವಂತೆ ಕೋರಿದ್ದೇನೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಅರ್ಧ ಭಾಗ ಪುಸ್ತಕ ಬಿಡುಗಡೆ, ಅಭಿನಂದನೆಗೆ ಸೀಮಿತವಾಯಿತು. ಬೆರಳೆಣಿಕೆಯಷ್ಟಿದ್ದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಶಿವಪ್ರಕಾಶ್, ಆಡಳಿತಾಧಿಕಾರಿ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷ, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಪಿಡಿಒ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಬುಧವಾರ ಪಂಚಾಯತ್ ರಾಜ್ ಇಲಾಖೆಯಿಂದ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡುತ್ತಿರುವಾಗ ಹಲವು ಸದಸ್ಯರು ವೇದಿಕೆ ಮುಂಭಾಗ ಬಂದು ಜಿಲ್ಲಾ ಪಂಚಾಯಿತಿ ಸಿಇಒ ಕಾರ್ಯಕ್ರಮಕ್ಕೆ ಬರದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. </p>.<p>ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ತರಬೇತಿ ಉತ್ತಮವಾಗಿದ್ದರೂ, ಅಧಿಕಾರ ಅವಧಿ ಮುಗಿಯುವ ಈ ಸಂದರ್ಭದಲ್ಲಿ ತರಬೇತಿಯ ಅಗತ್ಯ ಏನಿತ್ತು ಎಂದು ಅನೇಕರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಸದಸ್ಯರನ್ನು ಸಮಾಧಾನ ಪಡಿಸಿ ಮಾತನಾಡಿದ ಶಾಸಕ ಶ್ರೀನಿವಾಸ್, ಅಧಿಕಾರ ಮುಗಿಯುತ್ತಿರುವ ಸಂದರ್ಭದಲ್ಲಿ ಯಾವುದೇ ತರಬೇತಿ ನೀಡಿದರೂ ಪ್ರಯೋಜನವಾಗುವುದಿಲ್ಲ. ಅಧಿಕಾರಿಗಳು ಯಾವ ಕಾರಣಕ್ಕೆ ಈ ಕಾರ್ಯಕ್ರಮ ಆಯೋಜಿಸಿದರು ಎಂದು ತಿಳಿಯುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳನ್ನು ವಿಚಾರಿಸಿ ಪರಿಶೀಲಿಸೋಣ ಎಂದರು.</p>.<p>ತರಬೇತಿ ಕಾರ್ಯಗಾರಗಳನ್ನು ಪಂಚಾಯಿತಿ ಸದಸ್ಯರು ಆಯ್ಕೆಯಾದ ಪ್ರಾರಂಭದಲ್ಲಿ ಮಾಡಿದರೆ ಅನುಕೂಲವಾಗುವುದು. ಆದರೆ ಅಂತಿಮ ದಿನಗಳಲ್ಲಿ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಗ್ರಾಮೀಣ ಭಾಗದಲ್ಲಿ ವಸತಿ ರಹಿತರಿಗೆ ಅಗತ್ಯ ವಸತಿಯನ್ನು ಒದಗಿಸಲು ಸಾಧ್ಯವಾಗದಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಸಹಜ. ಈಗಾಗಲೇ ಸಂಬಂಧಿಸಿದ ಸಚಿವರ ಜೊತೆ ಚರ್ಚಿಸಿ ತಾಲ್ಲೂಕಿಗೆ ಅಗತ್ಯವಿರುವಷ್ಟು ವಸತಿಗಳನ್ನು ಒದಗಿಸುವಂತೆ ಕೋರಿದ್ದೇನೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಅರ್ಧ ಭಾಗ ಪುಸ್ತಕ ಬಿಡುಗಡೆ, ಅಭಿನಂದನೆಗೆ ಸೀಮಿತವಾಯಿತು. ಬೆರಳೆಣಿಕೆಯಷ್ಟಿದ್ದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಶಿವಪ್ರಕಾಶ್, ಆಡಳಿತಾಧಿಕಾರಿ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷ, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>