ಇದಕ್ಕೂ ಮುನ್ನ ಅ. 7ರಂದು ನಡೆಯಬೇಕಿದ್ದ ಅವಿಶ್ವಾಸ ನಿರ್ಣಯ ಮಂಡನೆ ಸಭೆಯನ್ನು ಚುನಾವಣೆ ಕಾರಣಕ್ಕೆ ಅ. 15ಕ್ಕೆ ಮುಂದೂಡಲಾಗಿತ್ತು. ಅಧಿಕಾರದಿಂದ ಕೆಳಗಿಳಿಸುವ ಪಣತೊಟ್ಟಿರುವ ಬಿಜೆಪಿ ಮುಖಂಡರು ಮತ್ತೊಮ್ಮೆ ಸಭೆ ಮುಂದೂಡಿಸುವ ಪ್ರಯತ್ನ ನಡೆಸಿದ್ದರು. ಅದಕ್ಕೂ ಮುನ್ನ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸದ್ಯಕ್ಕಂತೂ ಲತಾ ಅವರಿಗೆ ಜೀವದಾನ ಸಿಕ್ಕಂತಾಗಿದ್ದು, ಅಧಿಕಾರದಲ್ಲಿ ಮುಂದುವರಿದಿದ್ದಾರೆ.