<p><strong>ತುಮಕೂರು: </strong>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಅವರ ಕಾರ್ಯವೈಖರಿಯಲ್ಲಿ ವಿಶ್ವಾಸ ಇಲ್ಲ ಎಂದು ಸುಮಾರು 48 ಜಿಲ್ಲಾ ಪಂಚಾಯಿತಿ ಸದಸ್ಯರು ಮಂಗಳವಾರ ನಡೆಯಬೇಕಿದ್ದ ಸಾಮಾನ್ಯ ಸಭೆ ಬಹಿಷ್ಕರಿಸಿದರು.</p>.<p>ಕಳೆದ ಮೂರು ಸಾಮಾನ್ಯ ಸಭೆಗೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ನಾಲ್ಕನೇ ಸಭೆಗೂ ಅಸಮಾಧಾನ ಹೊರಹಾಕಿದರು. ಬಿಜೆಪಿಯ 19, ಕಾಂಗ್ರೆಸ್ನ 19, ಜೆಡಿಎಸ್ನ 14 ಸದಸ್ಯರು ಸಭೆ ಬಹಿಷ್ಕಾರಿಸಿದರು.</p>.<p>ಸಿಸಿ ಟಿವಿ ಕ್ಯಾಮೆರಾ ಖರೀದಿ ಹಗರಣಗಳನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಸದಸ್ಯರು ಲತಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ ಬಹುಮತ ಸಾಬೀತುಪಡಿಸದೆ ಸಭೆ ನಡೆಸುವಂತಿಲ್ಲ ಎಂದು ಹೊಯ್ಸಳಕಟ್ಟೆ ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಲಿಂಗಯ್ಯ ತಿಳಿಸಿದರು.</p>.<p>ಅಧ್ಯಕ್ಷರು ಸದಸ್ಯರ ವಿಶ್ವಾಸ ಉಳಿಸಿಕೊಳ್ಳಬೇಕು. ಆದರೆ ಅಧ್ಯಕ್ಷರು ಸದಸ್ಯರ ವಿಶ್ವಾಸ ಉಳಿಸಿಕೊಂಡಿಲ್ಲ ಎಂದು ರಾಮಕೃಷ್ಣ ಆರೋಪಿಸಿದರು.</p>.<p>ಅಕ್ಷರ ದಾಸೋಹ, ಸಿಸಿ ಟಿವಿ ಕ್ಯಾಮೆರಾ ಹಗರಣ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಸದಸ್ಯರು ಒತ್ತಾಯಿಸಿದರೂ ಅಧ್ಯಕ್ಷರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಅಧ್ಯಕ್ಷೆ ಲತಾ ರವಿಕುಮಾರ್ ಮಾತನಾಡಿ, ಕೋರಂ ಕೊರತೆಯ ಕಾರಣದಿಂದ ಸಾಮಾನ್ಯ ಸಭೆ ಮುಂದೂಡಲಾಗಿದೆ. ನನ್ನ ಬಗ್ಗೆ ಅಸಮಾಧಾನ ಇದ್ದರೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿತ್ತು. ಅದನ್ನು ಬಿಟ್ಟು ಸಭೆ ಬಹಿಷ್ಕಾರಿಸಿದ್ದು ಸರಿಯಲ್ಲ. ವರಿಷ್ಠರ ನಿರ್ಣಯದಂತೆ ಮುಂದುವರಿಯುತ್ತೇನೆ ಎಂದರು.</p>.<p>ಸದಸ್ಯರ ಮನವಿಗೆ ಸ್ಪಂದಿಸಲು, ಹಿಂದಿನ ಸಭೆಯಲ್ಲಿ ಚರ್ಚಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಭೆಗೆ ಕರೆಸಲಾಗಿತ್ತು. ನಾನು ಪಕ್ಷಬೇಧ ಮಾಡದೇ ಕೆಲಸ ನಿರ್ವಹಿಸುತ್ತಿದ್ದೇನೆ. 15ನೇ ಹಣಕಾಸು ಯೋಜನೆಯಡಿ ₹ 6.40 ಕೋಟಿ ಬಂದಿದೆ. ಇದನ್ನು ಸದಸ್ಯರಿಗೆ ಹಂಚಿಕೆ ಮಾಡಲು, ಕ್ರಿಯಾಯೋಜನೆ, ಅನುಮೋದನೆ ಪಡೆಯಲು ತೀರ್ಮಾನಿಸಲಾಗಿತ್ತು ಎಂದರು.</p>.<p>ಜಿಲ್ಲಾ ಪಂಚಾಯಿತಿ ಅನುದಾನ ಕಡಿಮೆ ಇರುವುದರಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗೆ ಒತ್ತಾಯಿಸಲು ನಿಯೋಗ ಭೇಟಿಯಾಗುವ ತೀರ್ಮಾನವಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಅವರ ಕಾರ್ಯವೈಖರಿಯಲ್ಲಿ ವಿಶ್ವಾಸ ಇಲ್ಲ ಎಂದು ಸುಮಾರು 48 ಜಿಲ್ಲಾ ಪಂಚಾಯಿತಿ ಸದಸ್ಯರು ಮಂಗಳವಾರ ನಡೆಯಬೇಕಿದ್ದ ಸಾಮಾನ್ಯ ಸಭೆ ಬಹಿಷ್ಕರಿಸಿದರು.</p>.<p>ಕಳೆದ ಮೂರು ಸಾಮಾನ್ಯ ಸಭೆಗೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ನಾಲ್ಕನೇ ಸಭೆಗೂ ಅಸಮಾಧಾನ ಹೊರಹಾಕಿದರು. ಬಿಜೆಪಿಯ 19, ಕಾಂಗ್ರೆಸ್ನ 19, ಜೆಡಿಎಸ್ನ 14 ಸದಸ್ಯರು ಸಭೆ ಬಹಿಷ್ಕಾರಿಸಿದರು.</p>.<p>ಸಿಸಿ ಟಿವಿ ಕ್ಯಾಮೆರಾ ಖರೀದಿ ಹಗರಣಗಳನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಸದಸ್ಯರು ಲತಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ ಬಹುಮತ ಸಾಬೀತುಪಡಿಸದೆ ಸಭೆ ನಡೆಸುವಂತಿಲ್ಲ ಎಂದು ಹೊಯ್ಸಳಕಟ್ಟೆ ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಲಿಂಗಯ್ಯ ತಿಳಿಸಿದರು.</p>.<p>ಅಧ್ಯಕ್ಷರು ಸದಸ್ಯರ ವಿಶ್ವಾಸ ಉಳಿಸಿಕೊಳ್ಳಬೇಕು. ಆದರೆ ಅಧ್ಯಕ್ಷರು ಸದಸ್ಯರ ವಿಶ್ವಾಸ ಉಳಿಸಿಕೊಂಡಿಲ್ಲ ಎಂದು ರಾಮಕೃಷ್ಣ ಆರೋಪಿಸಿದರು.</p>.<p>ಅಕ್ಷರ ದಾಸೋಹ, ಸಿಸಿ ಟಿವಿ ಕ್ಯಾಮೆರಾ ಹಗರಣ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಸದಸ್ಯರು ಒತ್ತಾಯಿಸಿದರೂ ಅಧ್ಯಕ್ಷರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಅಧ್ಯಕ್ಷೆ ಲತಾ ರವಿಕುಮಾರ್ ಮಾತನಾಡಿ, ಕೋರಂ ಕೊರತೆಯ ಕಾರಣದಿಂದ ಸಾಮಾನ್ಯ ಸಭೆ ಮುಂದೂಡಲಾಗಿದೆ. ನನ್ನ ಬಗ್ಗೆ ಅಸಮಾಧಾನ ಇದ್ದರೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿತ್ತು. ಅದನ್ನು ಬಿಟ್ಟು ಸಭೆ ಬಹಿಷ್ಕಾರಿಸಿದ್ದು ಸರಿಯಲ್ಲ. ವರಿಷ್ಠರ ನಿರ್ಣಯದಂತೆ ಮುಂದುವರಿಯುತ್ತೇನೆ ಎಂದರು.</p>.<p>ಸದಸ್ಯರ ಮನವಿಗೆ ಸ್ಪಂದಿಸಲು, ಹಿಂದಿನ ಸಭೆಯಲ್ಲಿ ಚರ್ಚಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಭೆಗೆ ಕರೆಸಲಾಗಿತ್ತು. ನಾನು ಪಕ್ಷಬೇಧ ಮಾಡದೇ ಕೆಲಸ ನಿರ್ವಹಿಸುತ್ತಿದ್ದೇನೆ. 15ನೇ ಹಣಕಾಸು ಯೋಜನೆಯಡಿ ₹ 6.40 ಕೋಟಿ ಬಂದಿದೆ. ಇದನ್ನು ಸದಸ್ಯರಿಗೆ ಹಂಚಿಕೆ ಮಾಡಲು, ಕ್ರಿಯಾಯೋಜನೆ, ಅನುಮೋದನೆ ಪಡೆಯಲು ತೀರ್ಮಾನಿಸಲಾಗಿತ್ತು ಎಂದರು.</p>.<p>ಜಿಲ್ಲಾ ಪಂಚಾಯಿತಿ ಅನುದಾನ ಕಡಿಮೆ ಇರುವುದರಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗೆ ಒತ್ತಾಯಿಸಲು ನಿಯೋಗ ಭೇಟಿಯಾಗುವ ತೀರ್ಮಾನವಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>