<p><strong>ಕುಣಿಗಲ್: </strong>ಕಲ್ಲು ಗಣಿಗಾರಿಕೆಗೆ ನೀಡಿರುವ ಪರವಾನಗಿಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಅಂದನಕುಪ್ಪೆ ಗ್ರಾಮಸ್ಥರು ತಾಲ್ಲೂಕಿನ ಸಂತೇಮಾವತ್ತೂರು ಗ್ರಾಮ ಪಂಚಾಯಿತಿ ಕಚೇರಿಗೆ ಶುಕ್ರವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.<br /> <br /> ಅಂದನಕುಪ್ಪೆ ಗ್ರಾಮದ ಸರ್ವೆ ನಂ.1ರಲ್ಲಿ ಬೆಂಗಳೂರಿನ ಖಾಸಗಿ ಕಂಪನಿಯೊಂದಕ್ಕೆ ಕಲ್ಲುಗಣಿಗಾರಿಕೆಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದರು. ಈ ಬಗ್ಗೆ ಗ್ರಾಮಸ್ಥರು, ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿ ರದ್ದುಪಡಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. <br /> <br /> ಇದರಿಂದ ಅಸಮಧಾನಗೊಂಡ ಗ್ರಾಮಸ್ಥರಾದ ಮಾರೇಗೌಡ, ಗೌಡಯ್ಯ, ರೇವಣ್ಣ, ವೆಂಕಟೇಶ್, ಕೆಂಚಮ್ಮ ಹಾಗೂ ಇತರರು ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.<br /> ಗಣಿಗಾರಿಕೆಗೆ ಪರವಾನಗಿ ನೀಡಿರುವ ಪ್ರದೇಶದ ಪಕ್ಕದಲ್ಲಿ ಸಾಮಾಜಿಕ ಅರಣ್ಯ ವಲಯ, ಸುತ್ತಮುತ್ತಲ ಗ್ರಾಮಗಳಿಗೆ ನೀರನ್ನು ಒದಗಿಸುವ ಕೆರೆ ಇದೆ. <br /> <br /> ಗಣಿಗಾರಿಕೆಗಾಗಿ ಸ್ಫೋಟಕಗಳನ್ನು ಬಳಸುತ್ತಿರುವುದರಿಂದ ಪರಿಸರದ ಮೇಲೆ ಹಾನಿ ಉಂಟಾಗುತ್ತಿರುವುದರ ಜೊತೆಗೆ, ಸುತ್ತಮುತ್ತಲಿನ ಮನೆಗಳಲ್ಲಿ ಬಿರುಕು ಉಂಟಾಗಿದೆ. ಪ್ರತಿದಿನ ಪ್ರಾಣ ಭೀತಿಯಿಂದ ಬದುಕುವಂತಾಗಿದೆ ಎಂದು ದೂರಿದರು.ಕೂಡಲೇ ಗಣಿಕಾರಿಕೆ ನಿಲ್ಲಿಸಬೇಕೆಂದು ಒತ್ತಾಯಿಸಿ ಪಿಡಿಓ ಕಾಂತರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್: </strong>ಕಲ್ಲು ಗಣಿಗಾರಿಕೆಗೆ ನೀಡಿರುವ ಪರವಾನಗಿಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಅಂದನಕುಪ್ಪೆ ಗ್ರಾಮಸ್ಥರು ತಾಲ್ಲೂಕಿನ ಸಂತೇಮಾವತ್ತೂರು ಗ್ರಾಮ ಪಂಚಾಯಿತಿ ಕಚೇರಿಗೆ ಶುಕ್ರವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.<br /> <br /> ಅಂದನಕುಪ್ಪೆ ಗ್ರಾಮದ ಸರ್ವೆ ನಂ.1ರಲ್ಲಿ ಬೆಂಗಳೂರಿನ ಖಾಸಗಿ ಕಂಪನಿಯೊಂದಕ್ಕೆ ಕಲ್ಲುಗಣಿಗಾರಿಕೆಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದರು. ಈ ಬಗ್ಗೆ ಗ್ರಾಮಸ್ಥರು, ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿ ರದ್ದುಪಡಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. <br /> <br /> ಇದರಿಂದ ಅಸಮಧಾನಗೊಂಡ ಗ್ರಾಮಸ್ಥರಾದ ಮಾರೇಗೌಡ, ಗೌಡಯ್ಯ, ರೇವಣ್ಣ, ವೆಂಕಟೇಶ್, ಕೆಂಚಮ್ಮ ಹಾಗೂ ಇತರರು ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.<br /> ಗಣಿಗಾರಿಕೆಗೆ ಪರವಾನಗಿ ನೀಡಿರುವ ಪ್ರದೇಶದ ಪಕ್ಕದಲ್ಲಿ ಸಾಮಾಜಿಕ ಅರಣ್ಯ ವಲಯ, ಸುತ್ತಮುತ್ತಲ ಗ್ರಾಮಗಳಿಗೆ ನೀರನ್ನು ಒದಗಿಸುವ ಕೆರೆ ಇದೆ. <br /> <br /> ಗಣಿಗಾರಿಕೆಗಾಗಿ ಸ್ಫೋಟಕಗಳನ್ನು ಬಳಸುತ್ತಿರುವುದರಿಂದ ಪರಿಸರದ ಮೇಲೆ ಹಾನಿ ಉಂಟಾಗುತ್ತಿರುವುದರ ಜೊತೆಗೆ, ಸುತ್ತಮುತ್ತಲಿನ ಮನೆಗಳಲ್ಲಿ ಬಿರುಕು ಉಂಟಾಗಿದೆ. ಪ್ರತಿದಿನ ಪ್ರಾಣ ಭೀತಿಯಿಂದ ಬದುಕುವಂತಾಗಿದೆ ಎಂದು ದೂರಿದರು.ಕೂಡಲೇ ಗಣಿಕಾರಿಕೆ ನಿಲ್ಲಿಸಬೇಕೆಂದು ಒತ್ತಾಯಿಸಿ ಪಿಡಿಓ ಕಾಂತರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>