<p><strong>ಕುಣಿಗಲ್:</strong> ಭಕ್ತರ ತೀವ್ರ ವಿರೋಧದ ನಡುವೆಯೂ ತಾಲ್ಲೂಕಿನ ಜಲಧಿಗೆರೆ ಗ್ರಾಮದ ಚಿಕ್ಕಮ್ಮ, ದೊಡ್ಡಮ್ಮ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ತಡೆಗಟ್ಟುವಲ್ಲಿ ವಿಶ್ವಪ್ರಾಣಿ ಕಲ್ಯಾಣ ಮಂಡಲಿ ಅಧ್ಯಕ್ಷ ದಯಾನಂದಸ್ವಾಮಿ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಯಶಸ್ವಿಯಾಯಿತು. ಚಿಕ್ಕಮ್ಮ, ದೊಡ್ಡಮ್ಮ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ಕೊಡುವ ಸಂಪ್ರದಾಯ ಬೆಳೆದು ಬಂದಿದ್ದು, ಇದನ್ನು ತಡೆಯುವಂತೆ ದಯಾನಂದಸ್ವಾಮಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. <br /> <br /> ಈ ಹಿನ್ನೆಲೆಯಲ್ಲಿ ಎಎಸ್ಪಿ ಡಾ.ಬೋರಲಿಂಗಯ್ಯ, ಸಿಪಿಐ ಬಿ.ಕೆ.ಶೇಖರ್ ಹಾಗೂ ಸಿಬ್ಬಂದಿ ಪ್ರಾಣಿಬಲಿ ತಡೆಗೆ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರು. ಆದರೂ, ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಅಸಂಖ್ಯಾತ ಭಕ್ತರು ಪ್ರಾಣಿಬಲಿ ಕೊಡಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾಗ ಏಕಾಂಗಿಯಾಗಿ ತೆರಳಿದ ದಯಾನಂದಸ್ವಾಮಿ, ದೇವಾಲಯಗಳು ಪವಿತ್ರಸ್ಥಳಗಳಾಗಿವೆ. ಪ್ರಾಣಿವಧೆಯ ಆಲಯಗಳಾಗುವುದು ಬೇಡ. ಈ ಬಗ್ಗೆ ಹೈಕೋರ್ಟ್ ಆದೇಶವಿದೆ ಎಂದು ಮನವೊಲಿಸಿ ಪ್ರಾಣಿಬಲಿ ಕೊಡದಂತೆ ತಡೆದರು. <br /> <br /> ಇದರಿಂದ ಆಕ್ರೋಶಗೊಂಡ ಭಕ್ತರ ಗುಂಪು ಸ್ವಾಮೀಜಿ ಅವರೊಂದಿಗೆ ವಾಗ್ವಾದಕ್ಕಿಳಿದು, ರಾಜ್ಯದ ಇತರೆ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿರುವ ಪ್ರಾಣಿಬಲಿಗಳ ಬಗ್ಗೆ ಚಕಾರ ಎತ್ತದೆ ಜಲಧಿಗೆರೆಯಲ್ಲಿ ಮಾತ್ರವೆ ನಿಮ್ಮ ಕಾರ್ಯಾಚರಣೆಯನ್ನು ಸೀಮಿತಗೊಳಿಸಿರುವುದರ ಹಿಂದಿನ ಉದ್ದೇಶವೇನೆಂದು ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ಕೈ ಮೀರಿ ಹೋಗದಂತೆ ಪೊಲೀಸರು ತಡೆದು ಕೊನೆಗೂ ಭಕ್ತರ ಮನವೊಲಿಸಿ ಪ್ರಾಣಿ ಬಲಿ ನಡೆಯದಂತೆ ತಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಭಕ್ತರ ತೀವ್ರ ವಿರೋಧದ ನಡುವೆಯೂ ತಾಲ್ಲೂಕಿನ ಜಲಧಿಗೆರೆ ಗ್ರಾಮದ ಚಿಕ್ಕಮ್ಮ, ದೊಡ್ಡಮ್ಮ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ತಡೆಗಟ್ಟುವಲ್ಲಿ ವಿಶ್ವಪ್ರಾಣಿ ಕಲ್ಯಾಣ ಮಂಡಲಿ ಅಧ್ಯಕ್ಷ ದಯಾನಂದಸ್ವಾಮಿ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಯಶಸ್ವಿಯಾಯಿತು. ಚಿಕ್ಕಮ್ಮ, ದೊಡ್ಡಮ್ಮ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ಕೊಡುವ ಸಂಪ್ರದಾಯ ಬೆಳೆದು ಬಂದಿದ್ದು, ಇದನ್ನು ತಡೆಯುವಂತೆ ದಯಾನಂದಸ್ವಾಮಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. <br /> <br /> ಈ ಹಿನ್ನೆಲೆಯಲ್ಲಿ ಎಎಸ್ಪಿ ಡಾ.ಬೋರಲಿಂಗಯ್ಯ, ಸಿಪಿಐ ಬಿ.ಕೆ.ಶೇಖರ್ ಹಾಗೂ ಸಿಬ್ಬಂದಿ ಪ್ರಾಣಿಬಲಿ ತಡೆಗೆ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರು. ಆದರೂ, ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಅಸಂಖ್ಯಾತ ಭಕ್ತರು ಪ್ರಾಣಿಬಲಿ ಕೊಡಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾಗ ಏಕಾಂಗಿಯಾಗಿ ತೆರಳಿದ ದಯಾನಂದಸ್ವಾಮಿ, ದೇವಾಲಯಗಳು ಪವಿತ್ರಸ್ಥಳಗಳಾಗಿವೆ. ಪ್ರಾಣಿವಧೆಯ ಆಲಯಗಳಾಗುವುದು ಬೇಡ. ಈ ಬಗ್ಗೆ ಹೈಕೋರ್ಟ್ ಆದೇಶವಿದೆ ಎಂದು ಮನವೊಲಿಸಿ ಪ್ರಾಣಿಬಲಿ ಕೊಡದಂತೆ ತಡೆದರು. <br /> <br /> ಇದರಿಂದ ಆಕ್ರೋಶಗೊಂಡ ಭಕ್ತರ ಗುಂಪು ಸ್ವಾಮೀಜಿ ಅವರೊಂದಿಗೆ ವಾಗ್ವಾದಕ್ಕಿಳಿದು, ರಾಜ್ಯದ ಇತರೆ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿರುವ ಪ್ರಾಣಿಬಲಿಗಳ ಬಗ್ಗೆ ಚಕಾರ ಎತ್ತದೆ ಜಲಧಿಗೆರೆಯಲ್ಲಿ ಮಾತ್ರವೆ ನಿಮ್ಮ ಕಾರ್ಯಾಚರಣೆಯನ್ನು ಸೀಮಿತಗೊಳಿಸಿರುವುದರ ಹಿಂದಿನ ಉದ್ದೇಶವೇನೆಂದು ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ಕೈ ಮೀರಿ ಹೋಗದಂತೆ ಪೊಲೀಸರು ತಡೆದು ಕೊನೆಗೂ ಭಕ್ತರ ಮನವೊಲಿಸಿ ಪ್ರಾಣಿ ಬಲಿ ನಡೆಯದಂತೆ ತಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>