<p>ತುಮಕೂರು: ಗಣೇಶೋತ್ಸವಗಳು ಭಾರತೀಯರ ವೈಶಿಷ್ಟ್ಯವನ್ನು ಸೂಚಿಸುತ್ತವೆ. ಅವುಗಳನ್ನು ಬೆಂಬಲಿಸಿ, ಪ್ರೋತ್ಸಾಹಿಸಬೇಕಾದ್ದು ಎಲ್ಲ ಭಾರತೀಯರ ಕರ್ತವ್ಯ ಎಂದು ಆರ್ಟ್ ಆಫ್ ಲೀವಿಂಗ್ನ ಶ್ರೀಶ್ರೀ ರವಿಶಂಕರ್ ಗುರೂಜಿ ಹೇಳಿದರು.<br /> <br /> ನಗರದ ಸಿದ್ದಿ ವಿನಾಯಕ ಸೇವಾ ಮಂಡಳಿ ಆಯೋಜಿಸಿರುವ ಗಣೇಶೋತ್ಸವ ಸಮಾರಂಭದಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವದಲ್ಲಿ ಭಾರತದ ಮೇಲ್ಮೆಯನ್ನು ಇಂಥ ಉತ್ಸವಗಳು ಸಾರಿ ಹೇಳುತ್ತವೆ ಎಂದು ಅಭಿಪ್ರಾಯಪಟ್ಟರು.<br /> <br /> ಶಿಕ್ಷಕರು ಅಜ್ಞಾನವನ್ನು, ಅಧಿಕಾರಿಗಳು ಅನ್ಯಾಯವನ್ನು, ವ್ಯಾಪಾರಿಗಳು ಅಭಾವವನ್ನು ಮತ್ತು ಎಲ್ಲರೂ ಒಗ್ಗೂಡಿ ಅಶುಚಿಯನ್ನು ಸಮಾಜದಿಂದ ತೊಲಗಿಸಬೇಕು. ಗಣೇಶೋತ್ಸವ ಸಮಿತಿಗಳು ವಿಗ್ರಹ ವಿಸರ್ಜನೆಯ ನಂತರ ಕೆರೆಕಟ್ಟೆಗಳ ಶುಚಿತ್ವ ಕಾಪಾಡಲು ಯತ್ನಿಸಬೇಕು ಎಂದರು.<br /> <br /> ಅಮರನಾಥ ಯಾತ್ರಾ ಸಮಿತಿಯ ಅಧ್ಯಕ್ಷನಾಗಿ ನನ್ನನ್ನು ನೇಮಿಸಲಾಗಿದೆ. ಹುರಿಯತ್ ಕಾನ್ಫರೆನ್ಸ್ ಸೇರಿದಂತೆ ಕಾಶ್ಮೀರದ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸಿ, ಶಾಂತಿಯುತ ಅಮರನಾಥ ಯಾತ್ರೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. <br /> <br /> ಕಾಶ್ಮೀರಿ ಜನರ ಸಹಕಾರದೊಂದಿಗೆ ಅಮರನಾಥಕ್ಕೆ ಹೊಸ ರಸ್ತೆ ನಿರ್ಮಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 6 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಅಮರನಾಥ ಗುಹೆ ಸಂದರ್ಶಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.<br /> ಗುರೂಜಿ ಅವರನ್ನು ಕಾಲ್ಟೆಕ್ಸ್ ವೃತ್ತದಿಂದ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು. ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್, ಡಿವೈಎಸ್ಪಿ ಶಿವಶಂಕರ್, ಉದ್ಯಮಿ ಎನ್.ಆರ್.ಜಗದೀಶ್, ಟಿ.ಆರ್.ಸದಾಶಿವಯ್ಯ, ಪ್ರಸನ್ನಕುಮಾರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಗಣೇಶೋತ್ಸವಗಳು ಭಾರತೀಯರ ವೈಶಿಷ್ಟ್ಯವನ್ನು ಸೂಚಿಸುತ್ತವೆ. ಅವುಗಳನ್ನು ಬೆಂಬಲಿಸಿ, ಪ್ರೋತ್ಸಾಹಿಸಬೇಕಾದ್ದು ಎಲ್ಲ ಭಾರತೀಯರ ಕರ್ತವ್ಯ ಎಂದು ಆರ್ಟ್ ಆಫ್ ಲೀವಿಂಗ್ನ ಶ್ರೀಶ್ರೀ ರವಿಶಂಕರ್ ಗುರೂಜಿ ಹೇಳಿದರು.<br /> <br /> ನಗರದ ಸಿದ್ದಿ ವಿನಾಯಕ ಸೇವಾ ಮಂಡಳಿ ಆಯೋಜಿಸಿರುವ ಗಣೇಶೋತ್ಸವ ಸಮಾರಂಭದಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವದಲ್ಲಿ ಭಾರತದ ಮೇಲ್ಮೆಯನ್ನು ಇಂಥ ಉತ್ಸವಗಳು ಸಾರಿ ಹೇಳುತ್ತವೆ ಎಂದು ಅಭಿಪ್ರಾಯಪಟ್ಟರು.<br /> <br /> ಶಿಕ್ಷಕರು ಅಜ್ಞಾನವನ್ನು, ಅಧಿಕಾರಿಗಳು ಅನ್ಯಾಯವನ್ನು, ವ್ಯಾಪಾರಿಗಳು ಅಭಾವವನ್ನು ಮತ್ತು ಎಲ್ಲರೂ ಒಗ್ಗೂಡಿ ಅಶುಚಿಯನ್ನು ಸಮಾಜದಿಂದ ತೊಲಗಿಸಬೇಕು. ಗಣೇಶೋತ್ಸವ ಸಮಿತಿಗಳು ವಿಗ್ರಹ ವಿಸರ್ಜನೆಯ ನಂತರ ಕೆರೆಕಟ್ಟೆಗಳ ಶುಚಿತ್ವ ಕಾಪಾಡಲು ಯತ್ನಿಸಬೇಕು ಎಂದರು.<br /> <br /> ಅಮರನಾಥ ಯಾತ್ರಾ ಸಮಿತಿಯ ಅಧ್ಯಕ್ಷನಾಗಿ ನನ್ನನ್ನು ನೇಮಿಸಲಾಗಿದೆ. ಹುರಿಯತ್ ಕಾನ್ಫರೆನ್ಸ್ ಸೇರಿದಂತೆ ಕಾಶ್ಮೀರದ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸಿ, ಶಾಂತಿಯುತ ಅಮರನಾಥ ಯಾತ್ರೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. <br /> <br /> ಕಾಶ್ಮೀರಿ ಜನರ ಸಹಕಾರದೊಂದಿಗೆ ಅಮರನಾಥಕ್ಕೆ ಹೊಸ ರಸ್ತೆ ನಿರ್ಮಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 6 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಅಮರನಾಥ ಗುಹೆ ಸಂದರ್ಶಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.<br /> ಗುರೂಜಿ ಅವರನ್ನು ಕಾಲ್ಟೆಕ್ಸ್ ವೃತ್ತದಿಂದ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು. ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್, ಡಿವೈಎಸ್ಪಿ ಶಿವಶಂಕರ್, ಉದ್ಯಮಿ ಎನ್.ಆರ್.ಜಗದೀಶ್, ಟಿ.ಆರ್.ಸದಾಶಿವಯ್ಯ, ಪ್ರಸನ್ನಕುಮಾರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>