‘ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಅವರು ಖುದ್ದು ಆಸಕ್ತಿ ವಹಿಸಿದ್ದಾರೆ. ಈಗಾಗಲೇ ಬಿದರೆಹಳ್ಳ ಕಾವಲ್ನ ಎಚ್ಎಎಲ್ ಘಟಕಕ್ಕೆ ಅಂಟಿಕೊಂಡಂತೆ ಹತ್ತು ಎಕರೆ ಸರ್ಕಾರಿ ಜಾಗವನ್ನು ಗುರುತಿಸುವಂತೆ ಗುಬ್ಬಿ ತಹಶೀಲ್ದಾರ್ ಅವರಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.