<p>ತುಮಕೂರು/ಗುಬ್ಬಿ: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಲೋಕಾಯುಕ್ತ ಬಳಸಿಕೊಂಡು ಡಿನೋಟಿಫಿಕೇಷನ್ ಪ್ರಕರಣದಲ್ಲಿ ತಮ್ಮ ವಿರುದ್ಧ ಚಾರ್ಜ್ಶೀಟ್ ಹಾಕಲು ಕಾರಣರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಆರೋಪಿಸಿದರು.<br /> <br /> ಮಂಗಳವಾರ ನಗರಕ್ಕೆ ಬಂದ ಅವರನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಮ್ಮದಾಗಲಿ ಅಥವಾ ಮಾಜಿ ಸಚಿವ ಸಿ.ಚೆನ್ನಗಪ್ಪ ಅವರದಾಗಲಿ ತಪ್ಪಿಲ್ಲ. <br /> <br /> ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್.ಅಶೋಕ್ ಪ್ರಕರಣ ತಮ್ಮ ಪ್ರಕರಣಕ್ಕಿಂತ ಭಿನ್ನವಾಗಿದೆ. ಡಿನೋಟಿಫಿಕೇಷನ್ ಮಾಡಿದ ಭೂಮಿಯನ್ನು ನಾನಾಗಲೀ, ಚೆನ್ನಗಪ್ಪ ಅವರಾಗಲೀ ಖರೀದಿಸಿಲ್ಲ. ಆದರೆ ಯಡಿಯೂರಪ್ಪ ಮತ್ತು ಅಶೋಕ್ ಭೂಮಿ ಡಿನೋಟಿಫಿಕೇಷನ್ ಮಾಡಿ ಅವರೇ ಖರೀದಿಸಿದ್ದಾರೆ ಎಂದು ಹೇಳಿದರು.<br /> <br /> ಜಾತಿ ಗೊಂದಲ ಮೂಡಿಸಿ ಲಾಭ ಪಡೆಯುವ ಉದ್ದೇಶದಿಂದ ಸದಾನಂದಗೌಡ ಅವರು ಜೆಡಿಎಸ್ನೊಂದಿಗೆ ಸಖ್ಯ ಬೆಳೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಪಾವಗಡ, ಶಿರಾ, ಮಧುಗಿರಿಗೆ ಭದ್ರಾ ಮೇಲ್ಡಂಡೆ ಯೋಜನೆಯಿಂದ 19 ಟಿಎಂಸಿ ನೀರು ಕೊಡುವ ಕಾರ್ಯಕ್ರಮಕ್ಕೆ ತಾವು ಮುಖ್ಯಮಂತ್ರಿ ಆಗಿದ್ದಾಗ ಚಾಲನೆ ನೀಡಲಾಗಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಯೋಜನೆ ಮಂದಗತಿಗೆ ಕಾರಣವಾಗಿದೆ. ತ್ವರಿತಗತಿಯಲ್ಲಿ ಈ ಯೋಜನೆ ಮುಗಿಸಬೇಕು ಎಂದು ಒತ್ತಾಯಿಸಿದರು.<br /> <br /> ಬರಗಾಲ ಪೀಡಿತ ಪ್ರದೇಶಗಳಲ್ಲಿ ಕುಡಿಯಲು ನೀರು ಸಹ ಇಲ್ಲ. ನೀರು ಪೂರೈಕೆಗೆ ಅಗತ್ಯವಾಗಿ ಬೇಕಾದ ವಿದ್ಯುತ್ ಸಹ ಸರ್ಕಾರ ನೀಡುತ್ತಿಲ್ಲ. ಜನರೇಟರ್ ಮೂಲಕವಾದರೂ ವಿದ್ಯುತ್ ನೀಡಿ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.<br /> <br /> ಗುಬ್ಬಿ ಸಮೀಪದ ಕರಿಯನಹಟ್ಟಿಯಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಖಾತೆಗಳ ಭಾರದಿಂದ ಬಳಲುತ್ತಿರುವ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.<br /> <br /> ಸಚಿವ ಸಂಪುಟ ವಿಸ್ತರಣೆ ಮಾಡಲಾಗದೇ ಮುಖ್ಯಮಂತ್ರಿ ಬಳಲಿ ಬೆಂಡಾಗಿದ್ದಾರೆ. ಆರೋಗ್ಯ, ಕಂದಾಯ ಇಲಾಖೆ ಸೇರಿದಂತೆ ಯಾವ ಇಲಾಖೆಯಲ್ಲೂ ಸರಿಯಾಗಿ ಕೆಲಸ ಆಗುತ್ತಿಲ್ಲ. ಜನರಿಗೆ ಗೌರವ ಕೊಟ್ಟಾದರೂ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.<br /> <br /> ಬರಗಾಲ ಪೀಡಿತ ರಾಜ್ಯದ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಿಲ್ಲ. ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಯಿಂದಾಗಿ ರಾಸಾಯನಿಕ ಗೊಬ್ಬರ ಕ್ವಿಂಟಲ್ಗೆ ರೂ. 2 ಸಾವಿರ ಆಗಲಿದೆ ಎಂದು ಹೇಳಲಾಗುತ್ತಿದೆ.<br /> <br /> ಈ ರೀತಿ ಆದಲ್ಲಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಅಭಿಪ್ರಾಯಪಟ್ಟರು. ಜೆಡಿಎಸ್ ಅಧಿಕಾರಕ್ಕೆ ಬಂದ್ದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. <br /> <br /> <strong>ವಿ.ವಿ ಲಾಂಛನ ಹೋರಾಟಕ್ಕೆ ಬೆಂಬಲ</strong><br /> ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಲಾಂಛನ ಬದಲು ಮಾಡಿರುವ ಕ್ರಮ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.<br /> <br /> ಮಂಗಳವಾರ ನಗರಕ್ಕೆ ಬಂದಿದ್ದ ಅವರನ್ನು ಭೇಟಿಯಾದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ತುಮಕೂರು ವಿ.ವಿ. ಲಾಂಛನವನ್ನು ತಾವು ಮುಖ್ಯಮಂತ್ರಿಯಾಗಿದ್ದಾಗ ರೂಪಿಸಲಾಗಿತ್ತು. ಹೊಸ ಲಾಂಛನ ವಿರೋಧಿಸಿ ಹೋರಾಟ ಮಾಡುತ್ತಿರುವ ಸಂಘಟನೆಗಳನ್ನು ಬೆಂಬಲಿಸುವುದಾಗಿ ಭರವಸೆ ನೀಡಿದರು.<br /> <br /> ಇದೇ ವೇಳೆ ಎಸ್ಎಫ್ಐ, ಡಿವೈಎಫ್ ನೇತೃತ್ವದ ತಂಡ ನೂತನ ಲಾಂಛನ ವಿರೋಧಿ ಹೋರಾಟಕ್ಕೆ ಬೆಂಬಲ ನೀಡುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಅರ್ಪಿಸಿತು. ಡಿವೈಎಫ್ಐ ಎಸ್. ರಾಘವೇಂದ್ರ ಮತ್ತಿತರರು ತಂಡದಲ್ಲಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು/ಗುಬ್ಬಿ: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಲೋಕಾಯುಕ್ತ ಬಳಸಿಕೊಂಡು ಡಿನೋಟಿಫಿಕೇಷನ್ ಪ್ರಕರಣದಲ್ಲಿ ತಮ್ಮ ವಿರುದ್ಧ ಚಾರ್ಜ್ಶೀಟ್ ಹಾಕಲು ಕಾರಣರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಆರೋಪಿಸಿದರು.<br /> <br /> ಮಂಗಳವಾರ ನಗರಕ್ಕೆ ಬಂದ ಅವರನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಮ್ಮದಾಗಲಿ ಅಥವಾ ಮಾಜಿ ಸಚಿವ ಸಿ.ಚೆನ್ನಗಪ್ಪ ಅವರದಾಗಲಿ ತಪ್ಪಿಲ್ಲ. <br /> <br /> ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್.ಅಶೋಕ್ ಪ್ರಕರಣ ತಮ್ಮ ಪ್ರಕರಣಕ್ಕಿಂತ ಭಿನ್ನವಾಗಿದೆ. ಡಿನೋಟಿಫಿಕೇಷನ್ ಮಾಡಿದ ಭೂಮಿಯನ್ನು ನಾನಾಗಲೀ, ಚೆನ್ನಗಪ್ಪ ಅವರಾಗಲೀ ಖರೀದಿಸಿಲ್ಲ. ಆದರೆ ಯಡಿಯೂರಪ್ಪ ಮತ್ತು ಅಶೋಕ್ ಭೂಮಿ ಡಿನೋಟಿಫಿಕೇಷನ್ ಮಾಡಿ ಅವರೇ ಖರೀದಿಸಿದ್ದಾರೆ ಎಂದು ಹೇಳಿದರು.<br /> <br /> ಜಾತಿ ಗೊಂದಲ ಮೂಡಿಸಿ ಲಾಭ ಪಡೆಯುವ ಉದ್ದೇಶದಿಂದ ಸದಾನಂದಗೌಡ ಅವರು ಜೆಡಿಎಸ್ನೊಂದಿಗೆ ಸಖ್ಯ ಬೆಳೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಪಾವಗಡ, ಶಿರಾ, ಮಧುಗಿರಿಗೆ ಭದ್ರಾ ಮೇಲ್ಡಂಡೆ ಯೋಜನೆಯಿಂದ 19 ಟಿಎಂಸಿ ನೀರು ಕೊಡುವ ಕಾರ್ಯಕ್ರಮಕ್ಕೆ ತಾವು ಮುಖ್ಯಮಂತ್ರಿ ಆಗಿದ್ದಾಗ ಚಾಲನೆ ನೀಡಲಾಗಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಯೋಜನೆ ಮಂದಗತಿಗೆ ಕಾರಣವಾಗಿದೆ. ತ್ವರಿತಗತಿಯಲ್ಲಿ ಈ ಯೋಜನೆ ಮುಗಿಸಬೇಕು ಎಂದು ಒತ್ತಾಯಿಸಿದರು.<br /> <br /> ಬರಗಾಲ ಪೀಡಿತ ಪ್ರದೇಶಗಳಲ್ಲಿ ಕುಡಿಯಲು ನೀರು ಸಹ ಇಲ್ಲ. ನೀರು ಪೂರೈಕೆಗೆ ಅಗತ್ಯವಾಗಿ ಬೇಕಾದ ವಿದ್ಯುತ್ ಸಹ ಸರ್ಕಾರ ನೀಡುತ್ತಿಲ್ಲ. ಜನರೇಟರ್ ಮೂಲಕವಾದರೂ ವಿದ್ಯುತ್ ನೀಡಿ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.<br /> <br /> ಗುಬ್ಬಿ ಸಮೀಪದ ಕರಿಯನಹಟ್ಟಿಯಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಖಾತೆಗಳ ಭಾರದಿಂದ ಬಳಲುತ್ತಿರುವ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.<br /> <br /> ಸಚಿವ ಸಂಪುಟ ವಿಸ್ತರಣೆ ಮಾಡಲಾಗದೇ ಮುಖ್ಯಮಂತ್ರಿ ಬಳಲಿ ಬೆಂಡಾಗಿದ್ದಾರೆ. ಆರೋಗ್ಯ, ಕಂದಾಯ ಇಲಾಖೆ ಸೇರಿದಂತೆ ಯಾವ ಇಲಾಖೆಯಲ್ಲೂ ಸರಿಯಾಗಿ ಕೆಲಸ ಆಗುತ್ತಿಲ್ಲ. ಜನರಿಗೆ ಗೌರವ ಕೊಟ್ಟಾದರೂ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.<br /> <br /> ಬರಗಾಲ ಪೀಡಿತ ರಾಜ್ಯದ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಿಲ್ಲ. ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಯಿಂದಾಗಿ ರಾಸಾಯನಿಕ ಗೊಬ್ಬರ ಕ್ವಿಂಟಲ್ಗೆ ರೂ. 2 ಸಾವಿರ ಆಗಲಿದೆ ಎಂದು ಹೇಳಲಾಗುತ್ತಿದೆ.<br /> <br /> ಈ ರೀತಿ ಆದಲ್ಲಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಅಭಿಪ್ರಾಯಪಟ್ಟರು. ಜೆಡಿಎಸ್ ಅಧಿಕಾರಕ್ಕೆ ಬಂದ್ದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. <br /> <br /> <strong>ವಿ.ವಿ ಲಾಂಛನ ಹೋರಾಟಕ್ಕೆ ಬೆಂಬಲ</strong><br /> ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಲಾಂಛನ ಬದಲು ಮಾಡಿರುವ ಕ್ರಮ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.<br /> <br /> ಮಂಗಳವಾರ ನಗರಕ್ಕೆ ಬಂದಿದ್ದ ಅವರನ್ನು ಭೇಟಿಯಾದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ತುಮಕೂರು ವಿ.ವಿ. ಲಾಂಛನವನ್ನು ತಾವು ಮುಖ್ಯಮಂತ್ರಿಯಾಗಿದ್ದಾಗ ರೂಪಿಸಲಾಗಿತ್ತು. ಹೊಸ ಲಾಂಛನ ವಿರೋಧಿಸಿ ಹೋರಾಟ ಮಾಡುತ್ತಿರುವ ಸಂಘಟನೆಗಳನ್ನು ಬೆಂಬಲಿಸುವುದಾಗಿ ಭರವಸೆ ನೀಡಿದರು.<br /> <br /> ಇದೇ ವೇಳೆ ಎಸ್ಎಫ್ಐ, ಡಿವೈಎಫ್ ನೇತೃತ್ವದ ತಂಡ ನೂತನ ಲಾಂಛನ ವಿರೋಧಿ ಹೋರಾಟಕ್ಕೆ ಬೆಂಬಲ ನೀಡುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಅರ್ಪಿಸಿತು. ಡಿವೈಎಫ್ಐ ಎಸ್. ರಾಘವೇಂದ್ರ ಮತ್ತಿತರರು ತಂಡದಲ್ಲಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>