ತುರುವೇಕೆರೆ: ಜಮೀನು ವಿವಾದದ ಹಿನ್ನೆಲೆಯಲ್ಲಿ ಆಸ್ತಿಯೊಂದನ್ನು ಸ್ವಾಧೀನ ಪಡಿಸಿಕೊಳ್ಳಲು ಆ ಜಾಗದಲ್ಲಿದ್ದ ಮನೆ ಕೆಡವಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕುಟುಂಬವನ್ನು ಬೀದಿಪಾಲು ಮಾಡಿರುವ ಅಮಾನವೀಯ ಘಟನೆ ದಂಡಿನಶಿವರ ಹೋಬಳಿ ಬಿ.ಸಿ.ಕಾವಲ್ನಲ್ಲಿ ನಡೆದಿದೆ.
ಬಿ.ಸಿ.ಕಾವಲ್ನ ಬಿ.ವಿ.ಸುರಪುರ ಹಾಗೂ ಮಹದೇವಯ್ಯ ನಡುವೆ ಹಲ ವರ್ಷಗಳಿಂದ ಜಮೀನು ವಿವಾದವಿತ್ತು. ಸುರಪುರ ಈ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನ್ಯಾಯಾಲಯ ಸುರಪುರ ಅವರಿಗೆ ಜಮೀನು ಸೇರಬೇಕು ಎಂದು ತೀರ್ಪು ನೀಡಿತ್ತು. ಆದರೆ ಸುರುಪುರ ಜಮೀನು ಸಂಪೂರ್ಣ ತಮ್ಮ ಸ್ವಾಧೀನದಲ್ಲಿದೆ ಎಂದು ತಪ್ಪು ಮಾಹಿತಿ ನೀಡಿದ್ದರು ಎನ್ನಲಾಗಿದೆ.
ಮಹದೇವಯ್ಯ ವಾಸವಾಗಿದ್ದ ಮನೆ ಸ್ವಾಧೀನಪಡಿಸಿಕೊಳ್ಳಲು ಸುರುಪುರ ಕಾನೂನಿನ ಮೊರೆ ಹೋಗಿ ಪೊಲೀಸರ ರಕ್ಷಣೆ ಕೇಳಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ವಿವಾದ ಬಗೆಹರಿಸುವಂತೆ ತಹಶೀಲ್ದಾರ್ರಿಗೆ ಸೂಚನೆ ನೀಡಲಾಗಿತ್ತು. ತಹಶೀಲ್ದಾರ್ ಸುರುಪುರ ತಮ್ಮ ಜಮೀನಿನ ಮೇಲೆ ಸ್ವಾಧೀನ ಪಡೆಯಲು ಪೊಲೀಸರ ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.
ಈ ಸಂಬಂಧ ಪೊಲೀಸ್ ಅಧಿಕಾರಿಗಳು ತನಿಖೆಗೆ ಹೋದ ಸಂದರ್ಭದಲ್ಲೇ ಸುರುಪುರ ಹಾಗೂ ಅವರ 70ಕ್ಕೂ ಹೆಚ್ಚು ಬೆಂಬಲಿಗರು ಸೋಮವಾರ ಸಂಜೆ ಮನೆಯಲ್ಲಿ ಮಲಗಿದ್ದ ಮಹದೇವಯ್ಯ ಅವರನ್ನು ಹೊರ ದಬ್ಬಿ ಮನೆಯಲ್ಲಿದ್ದ ವಸ್ತುಗಳನ್ನು ಆಚೆ ಎಸೆದು ಮನೆ ಧ್ವಂಸಗೊಳಿಸಿದ್ದಾರೆ.
ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಶಿವರುದ್ರಸ್ವಾಮಿ, ಮಹದೇವಯ್ಯ ಕುಟುಂಬದ ಅಹವಾಲು ಆಲಿಸಿದರು. ಇದು ಭೂ ವಿವಾದವಾದ್ದರಿಂದ ತಹಶೀಲ್ದಾರ್ ವಿವೇಚನೆಗೆ ಒಳಪಡುತ್ತದೆ. ನೀವೂ ಕೂಡ ನಿಮಗಾದ ಅನ್ಯಾಯದ ಬಗ್ಗೆ ದೂರು ದಾಖಲಿಸಬಹುದು ಎಂದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.