<p><strong>ಗೌರಿಬಿದನೂರು:</strong> ಬಸವ, ಇಂದಿರಾ, ಆಶ್ರಯ ವಸತಿ ಯೋಜನೆಯಡಿ 2010-11ರ ಸಾಲಿನಲ್ಲಿ ತಾಲ್ಲೂಕಿಗೆ ಮಂಜೂರಾದ ಎರಡು ಸಾವಿರ ಮನೆಗಳಲ್ಲಿ 423 ಮನೆಗಳು ರದ್ದಾಗಿವೆ ಎಂದು ತಾಲ್ಲೂಕು ಪಂಚಾಯಿತಿ ಅಧಿಕಾರಿ ಪ್ರಶಾಂತ್ ಬುಧವಾರ ನಡೆದ ಸಭೆಯಲ್ಲಿ ಗಮನಕ್ಕೆ ತಂದರು.<br /> <br /> ಮನೆಗಳನ್ನು ನಿರ್ಮಿಸಿಕೊಳ್ಳಲು ಆರ್ಥಿಕವಾಗಿ ಸದೃಢರಾಗದಿರುವುದರಿಂದ ಫಲಾನುಭವಿಗಳ ಮನೆಗಳು ರದ್ದಾಗಿವೆ. ಸ್ಥಗಿತಗೊಂಡಿರುವ ಮನೆಗಳ ಪಟ್ಟಿಯನ್ನು ಮತ್ತೆ ನೀಡಲು ಜಿಲ್ಲಾ ಪಂಚಾಯಿತಿಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದರು.<br /> <br /> ಇಲಾಖೆಯ ಅಧಿಕಾರಿಗಳು ಪ್ರಗತಿ ಪರಿಶೀಲನೆ ವರದಿಗಳನ್ನು ಒಪ್ಪಿಸಿದಾಗ ಸಮಾಧಾನಗೊಳ್ಳದ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಓ ಮತ್ತು ಕಾರ್ಯದರ್ಶಿಗಳು ಗ್ರಾಮಗಳ ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಕಾಟಾಚಾರಕ್ಕೆ ಗ್ರಾಮ ಸಭೆಗಳನ್ನು ನಡೆಸುತ್ತಾರೆ ಎಂದು ಹೇಳಿದರು.<br /> <br /> 2010-11ನೇ ಸಾಲಿನಲ್ಲಿ ಅಂಬೇಡ್ಕರ್ ವಸತಿ ಯೋಜನೆಯಡಿ 30 ಮನೆಗಳು ಮುಂಜೂರಾಗಿವೆ. <br /> ಇವುಗಳನ್ನು ತಾಲ್ಲೂಕಿನ ಜೀತ ಮುಕ್ತರಿಗೆ ನೀಡಬೇಕು ಎಂದು ಸದಸ್ಯರು ಹೇಳಿದರು.<br /> ಜಲಾನಯನ ಇಲಾಖೆಯಿಂದ ರಚಿಸಿಕೊಂಡಿರುವ ಸಂಘದ ಮಹಿಳೆಯರಿಗೆ ಉದ್ಯೋಗ ಪಡೆಯಲು ತಲಾ 5ರಿಂದ 10 ಸಾವಿರ ರೂಪಾಯಿ ಸಾಲ ಸೌಲಭ್ಯ ನೀಡಲಾಗಿದೆ ಎಂದು ಜಲಾನಯನ ಇಲಾಖೆ ಅಧಿಕಾರಿಗಳು ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಅಧ್ಯಕ್ಷತೆ ವಹಿಸಿದ್ದರು. <br /> ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವ್ಯಾಸರಾಜ್, ವ್ಯವಸ್ಥಾಪಕ ವೆಂಕಟರವಣಪ್ಪ ಮೊದಲಾದವರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ಬಸವ, ಇಂದಿರಾ, ಆಶ್ರಯ ವಸತಿ ಯೋಜನೆಯಡಿ 2010-11ರ ಸಾಲಿನಲ್ಲಿ ತಾಲ್ಲೂಕಿಗೆ ಮಂಜೂರಾದ ಎರಡು ಸಾವಿರ ಮನೆಗಳಲ್ಲಿ 423 ಮನೆಗಳು ರದ್ದಾಗಿವೆ ಎಂದು ತಾಲ್ಲೂಕು ಪಂಚಾಯಿತಿ ಅಧಿಕಾರಿ ಪ್ರಶಾಂತ್ ಬುಧವಾರ ನಡೆದ ಸಭೆಯಲ್ಲಿ ಗಮನಕ್ಕೆ ತಂದರು.<br /> <br /> ಮನೆಗಳನ್ನು ನಿರ್ಮಿಸಿಕೊಳ್ಳಲು ಆರ್ಥಿಕವಾಗಿ ಸದೃಢರಾಗದಿರುವುದರಿಂದ ಫಲಾನುಭವಿಗಳ ಮನೆಗಳು ರದ್ದಾಗಿವೆ. ಸ್ಥಗಿತಗೊಂಡಿರುವ ಮನೆಗಳ ಪಟ್ಟಿಯನ್ನು ಮತ್ತೆ ನೀಡಲು ಜಿಲ್ಲಾ ಪಂಚಾಯಿತಿಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದರು.<br /> <br /> ಇಲಾಖೆಯ ಅಧಿಕಾರಿಗಳು ಪ್ರಗತಿ ಪರಿಶೀಲನೆ ವರದಿಗಳನ್ನು ಒಪ್ಪಿಸಿದಾಗ ಸಮಾಧಾನಗೊಳ್ಳದ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಓ ಮತ್ತು ಕಾರ್ಯದರ್ಶಿಗಳು ಗ್ರಾಮಗಳ ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಕಾಟಾಚಾರಕ್ಕೆ ಗ್ರಾಮ ಸಭೆಗಳನ್ನು ನಡೆಸುತ್ತಾರೆ ಎಂದು ಹೇಳಿದರು.<br /> <br /> 2010-11ನೇ ಸಾಲಿನಲ್ಲಿ ಅಂಬೇಡ್ಕರ್ ವಸತಿ ಯೋಜನೆಯಡಿ 30 ಮನೆಗಳು ಮುಂಜೂರಾಗಿವೆ. <br /> ಇವುಗಳನ್ನು ತಾಲ್ಲೂಕಿನ ಜೀತ ಮುಕ್ತರಿಗೆ ನೀಡಬೇಕು ಎಂದು ಸದಸ್ಯರು ಹೇಳಿದರು.<br /> ಜಲಾನಯನ ಇಲಾಖೆಯಿಂದ ರಚಿಸಿಕೊಂಡಿರುವ ಸಂಘದ ಮಹಿಳೆಯರಿಗೆ ಉದ್ಯೋಗ ಪಡೆಯಲು ತಲಾ 5ರಿಂದ 10 ಸಾವಿರ ರೂಪಾಯಿ ಸಾಲ ಸೌಲಭ್ಯ ನೀಡಲಾಗಿದೆ ಎಂದು ಜಲಾನಯನ ಇಲಾಖೆ ಅಧಿಕಾರಿಗಳು ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಅಧ್ಯಕ್ಷತೆ ವಹಿಸಿದ್ದರು. <br /> ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವ್ಯಾಸರಾಜ್, ವ್ಯವಸ್ಥಾಪಕ ವೆಂಕಟರವಣಪ್ಪ ಮೊದಲಾದವರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>