<p><strong>ತುಮಕೂರು:</strong> ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸುವ ಮಸೂದೆಗೆ ಸೋಮವಾರ ನಡೆದ ಹನ್ನೊಂದನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಒಕ್ಕೊರಲಿನಿಂದ ಬೆಂಬಲಿಸಿತು.<br /> <br /> ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಆತಂಕ ಎದುರಾಗಿದೆ. ಬಹುತೇಕ ಮನೆ, ಮನಗಳಲ್ಲಿ ಕನ್ನಡ ಭಾಷೆಗೆ ವಂಚನೆ ಎಸಗುತ್ತಿರುವ ಸಂದೇಹ ಕಾಡುತ್ತಿದೆ ಎಂದು ಜಿ.ಪಂ. ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಹೇಳಿದರು.<br /> <br /> ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಇಂಗ್ಲಿಷ್ ಶಾಲೆಗಳ ಸ್ವೇಚ್ಛಾಚಾರ ಹೆಚ್ಚಾಗಿದೆ. ಜನಪ್ರತಿನಿಧಿಗಳೂ ಕೂಡ ಇಂಗ್ಲಿಷ್ ಶಾಲೆಗಳ ಬೆನ್ನಿಗೆ ನಿಂತಿರುವುದು ವಿಪರ್ಯಾಸ ಎಂದರು.<br /> <br /> ಕನ್ನಡ ಭಾಷೆ ಮೇಲೆ ದಾಳಿ, ದಬ್ಬಾಳಿಕೆ ನಡೆದರೂ ಅದನ್ನು ಸಹಿಸಿಕೊಂಡು ಹೋಗುವ ಗುಣ ಕನ್ನಡಕ್ಕಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ತಿಳಿಸಿದರು.<br /> <br /> ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳ ಯಾವ ನಿರ್ಣಯವನ್ನೂ ಈವರೆಗೆ ಅನುಷ್ಠಾನಗೊಳಿಸಿಲ್ಲ. ಈ ಬಗ್ಗೆ ಗಂಭೀರ ಚರ್ಚೆ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎನ್.ಗೋವಿಂದರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸುವ ಮಸೂದೆಗೆ ಸೋಮವಾರ ನಡೆದ ಹನ್ನೊಂದನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಒಕ್ಕೊರಲಿನಿಂದ ಬೆಂಬಲಿಸಿತು.<br /> <br /> ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಆತಂಕ ಎದುರಾಗಿದೆ. ಬಹುತೇಕ ಮನೆ, ಮನಗಳಲ್ಲಿ ಕನ್ನಡ ಭಾಷೆಗೆ ವಂಚನೆ ಎಸಗುತ್ತಿರುವ ಸಂದೇಹ ಕಾಡುತ್ತಿದೆ ಎಂದು ಜಿ.ಪಂ. ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಹೇಳಿದರು.<br /> <br /> ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಇಂಗ್ಲಿಷ್ ಶಾಲೆಗಳ ಸ್ವೇಚ್ಛಾಚಾರ ಹೆಚ್ಚಾಗಿದೆ. ಜನಪ್ರತಿನಿಧಿಗಳೂ ಕೂಡ ಇಂಗ್ಲಿಷ್ ಶಾಲೆಗಳ ಬೆನ್ನಿಗೆ ನಿಂತಿರುವುದು ವಿಪರ್ಯಾಸ ಎಂದರು.<br /> <br /> ಕನ್ನಡ ಭಾಷೆ ಮೇಲೆ ದಾಳಿ, ದಬ್ಬಾಳಿಕೆ ನಡೆದರೂ ಅದನ್ನು ಸಹಿಸಿಕೊಂಡು ಹೋಗುವ ಗುಣ ಕನ್ನಡಕ್ಕಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ತಿಳಿಸಿದರು.<br /> <br /> ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳ ಯಾವ ನಿರ್ಣಯವನ್ನೂ ಈವರೆಗೆ ಅನುಷ್ಠಾನಗೊಳಿಸಿಲ್ಲ. ಈ ಬಗ್ಗೆ ಗಂಭೀರ ಚರ್ಚೆ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎನ್.ಗೋವಿಂದರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>