<p>ಮಧುಗಿರಿ: ಒಂದು ಕಾಲಕ್ಕೆ ಆಕರ್ಷಕ ಮಾದರಿ ರಸ್ತೆಯಾಗಿದ್ದ ಪಟ್ಟಣದ ದ್ವಿಪಥ ರಸ್ತೆ ಸ್ಥಳೀಯ ಆಡಳಿತ ನಿರ್ಲಕ್ಷ್ಯದಿಂದ ದುಃಸ್ಥಿತಿ ತಲುಪಿದೆ.<br /> <br /> ಸರ್ಕಾರಿ ಪ್ರೌಢಶಾಲೆ, ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು, ಕ್ರೀಡಾಂಗಣ, ಎಲ್ಐಸಿ, ದೂರವಾಣಿ ವಿನಿಮಯ ಕಚೇರಿ, ಡಿವೈಎಸ್ಪಿ ಕಚೇರಿ, ತೋಟಗಾರಿಕೆ ಇಲಾಖೆಗಳಿಗೆ ಸಂಪರ್ಕ ರಸ್ತೆಯಾಗಿದೆ. ಅಲ್ಲದೆ ಪಾವಗಡ ಶಿರಾ ಮಾರ್ಗದ ವಾಹನಗಳು ಈ ರಸ್ತೆಯಲ್ಲಿಯೇ ಹಾದು ಹೋಗಬೇಕಾಗಿರುವುದರಿಂದ ವಾಹನ ದಟ್ಟಣೆ ಸಾಮಾನ್ಯ.<br /> <br /> `ಈ ರಸ್ತೆಯಲ್ಲಿ ಮಾಂಸದ ಮಾರುಕಟ್ಟೆ ಸಹ ಇರುವುದರಿಂದ ಹಂದಿ ನಾಯಿಗಳ ಕಾಟ ವಿಪರೀತವಾಗಿದೆ. ದ್ವಿಚಕ್ರ ವಾಹನ ಸವಾರರಂತೂ ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಕಟ್ಟಿಟ್ಟ ಬುತ್ತಿ. ಇಂತಹ ಹದಗೆಟ್ಟ ರಸ್ತೆಯಲ್ಲಿಯೇ ಪಯಣಿಸುವುದು ನಮ್ಮ ದುರದೃಷ್ಟ ಎಂದು ಅಳಲು ತೋಡಿಕೊಳ್ಳುತ್ತಾರೆ ಸ್ಥಳೀಯ ನಾಗರಿಕ ಮಹೇಶ್.<br /> <br /> ಈ ರಸ್ತೆಯನ್ನು ಸುಸ್ಥಿತಿಯಲ್ಲಿಡಬೇಕಾದ ಜವಾಬ್ದಾರಿ ಪುರಸಭೆಯದು. ಆದರೆ ಈ ರಸ್ತೆ ರಾಷ್ಟ್ರೀಯ ಹೆದ್ದಾರಿ ನಿರೀಕ್ಷೆಯಲ್ಲಿ ಈ ರಸ್ತೆಯ ನಿರ್ವಹಣೆ ಮಾಡಿಲ್ಲ ಎನ್ನುವುದು ಪುರಸಭೆ ಅಧಿಕಾರಿಗಳ ಸಮಜಾಯಿಷಿ.<br /> <br /> ಹೆದ್ದಾರಿ ನೆಪವೊಡ್ಡಿ ದಶಕದಿಂದ ಈ ರಸ್ತೆ ಬಗ್ಗೆ ಏಕೆ ಗಮನ ಹರಿಸಿಲ್ಲ ಎಂಬುದು ನಾಗರಿಕರ ಪ್ರಶ್ನೆ. ಪಟ್ಟಣದ ಉಳಿದ ರಸ್ತೆಗಳ ಸ್ಥಿತಿ ಇದಕ್ಕಿಂತ ಭಿನ್ನವಾಗಿಯೇನೂ ಇಲ್ಲ. ಆದರೆ ಸಾವಿರಾರು ವಾಹನ ನಿತ್ಯ ಸಂಚರಿಸುವುದರಿಂದ ದುರಸ್ತಿ ಅತ್ಯವಶ್ಯಕ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ತುರ್ತು ನಿಗಾವಹಿಸಲಿ ಎನ್ನುವುದು ಪಟ್ಟಣದ ನಾಗರಿಕರ ಆಶಯ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ: ಒಂದು ಕಾಲಕ್ಕೆ ಆಕರ್ಷಕ ಮಾದರಿ ರಸ್ತೆಯಾಗಿದ್ದ ಪಟ್ಟಣದ ದ್ವಿಪಥ ರಸ್ತೆ ಸ್ಥಳೀಯ ಆಡಳಿತ ನಿರ್ಲಕ್ಷ್ಯದಿಂದ ದುಃಸ್ಥಿತಿ ತಲುಪಿದೆ.<br /> <br /> ಸರ್ಕಾರಿ ಪ್ರೌಢಶಾಲೆ, ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು, ಕ್ರೀಡಾಂಗಣ, ಎಲ್ಐಸಿ, ದೂರವಾಣಿ ವಿನಿಮಯ ಕಚೇರಿ, ಡಿವೈಎಸ್ಪಿ ಕಚೇರಿ, ತೋಟಗಾರಿಕೆ ಇಲಾಖೆಗಳಿಗೆ ಸಂಪರ್ಕ ರಸ್ತೆಯಾಗಿದೆ. ಅಲ್ಲದೆ ಪಾವಗಡ ಶಿರಾ ಮಾರ್ಗದ ವಾಹನಗಳು ಈ ರಸ್ತೆಯಲ್ಲಿಯೇ ಹಾದು ಹೋಗಬೇಕಾಗಿರುವುದರಿಂದ ವಾಹನ ದಟ್ಟಣೆ ಸಾಮಾನ್ಯ.<br /> <br /> `ಈ ರಸ್ತೆಯಲ್ಲಿ ಮಾಂಸದ ಮಾರುಕಟ್ಟೆ ಸಹ ಇರುವುದರಿಂದ ಹಂದಿ ನಾಯಿಗಳ ಕಾಟ ವಿಪರೀತವಾಗಿದೆ. ದ್ವಿಚಕ್ರ ವಾಹನ ಸವಾರರಂತೂ ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಕಟ್ಟಿಟ್ಟ ಬುತ್ತಿ. ಇಂತಹ ಹದಗೆಟ್ಟ ರಸ್ತೆಯಲ್ಲಿಯೇ ಪಯಣಿಸುವುದು ನಮ್ಮ ದುರದೃಷ್ಟ ಎಂದು ಅಳಲು ತೋಡಿಕೊಳ್ಳುತ್ತಾರೆ ಸ್ಥಳೀಯ ನಾಗರಿಕ ಮಹೇಶ್.<br /> <br /> ಈ ರಸ್ತೆಯನ್ನು ಸುಸ್ಥಿತಿಯಲ್ಲಿಡಬೇಕಾದ ಜವಾಬ್ದಾರಿ ಪುರಸಭೆಯದು. ಆದರೆ ಈ ರಸ್ತೆ ರಾಷ್ಟ್ರೀಯ ಹೆದ್ದಾರಿ ನಿರೀಕ್ಷೆಯಲ್ಲಿ ಈ ರಸ್ತೆಯ ನಿರ್ವಹಣೆ ಮಾಡಿಲ್ಲ ಎನ್ನುವುದು ಪುರಸಭೆ ಅಧಿಕಾರಿಗಳ ಸಮಜಾಯಿಷಿ.<br /> <br /> ಹೆದ್ದಾರಿ ನೆಪವೊಡ್ಡಿ ದಶಕದಿಂದ ಈ ರಸ್ತೆ ಬಗ್ಗೆ ಏಕೆ ಗಮನ ಹರಿಸಿಲ್ಲ ಎಂಬುದು ನಾಗರಿಕರ ಪ್ರಶ್ನೆ. ಪಟ್ಟಣದ ಉಳಿದ ರಸ್ತೆಗಳ ಸ್ಥಿತಿ ಇದಕ್ಕಿಂತ ಭಿನ್ನವಾಗಿಯೇನೂ ಇಲ್ಲ. ಆದರೆ ಸಾವಿರಾರು ವಾಹನ ನಿತ್ಯ ಸಂಚರಿಸುವುದರಿಂದ ದುರಸ್ತಿ ಅತ್ಯವಶ್ಯಕ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ತುರ್ತು ನಿಗಾವಹಿಸಲಿ ಎನ್ನುವುದು ಪಟ್ಟಣದ ನಾಗರಿಕರ ಆಶಯ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>