ತುಮಕೂರು: ನಗರದ ಹೊರ ವಲಯದ ಕೋರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ.
ಶಿರಾ ನಿವಾಸಿ ರಾಘವೇಂದ್ರ ಹಾಗೂ ಚಾಲಕ ಗುನ್ನಯ್ಯ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಜಿ ಸಚಿವ ಸತ್ಯನಾರಾಯಣ ಅವರ ಅಳಿಯ ರಾಘವೇಂದ್ರ ಹಾಗೂ ಮಧುಸೂದನ್ ಎಂಬುವರು ತೀವ್ರ ಗಾಯಗೊಂಡಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಲ್ಲರೂ ಶಿರಾದವರೇ ಆಗಿದ್ದಾರೆ. ದುಬೈ ಪ್ರವಾಸ ಮುಗಿಸಿಕೊಂಡು ಮಂಗಳವಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಕಾರಿನಲ್ಲಿ ಸ್ವಂತ ಊರು ಶಿರಾಕ್ಕೆ ಹೊರಟಿದ್ದಾಗ ಮುಂದೆ ಹೊರಟಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ಕೋರಾ ಠಾಣೆಯಲ್ಲಿ ದಾಖಲಾಗಿದೆ.