<p> ಪಾವಗಡ: ನಿಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವ ಶಾಲೆಗಳ ಗುಣಮಟ್ಟದತ್ತ ಗ್ರಾಮೀಣ ಜನರ ಗಮನ ಹೆಚ್ಚಬೇಕಿದೆ ಎಂದು ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಜಪಾನಂದಜೀ ತಿಳಿಸಿದರು.<br /> ತಾಲ್ಲೂಕಿನ ಎಸ್.ಆರ್.ಪಾಳ್ಯ ಗ್ರಾಮದಲ್ಲಿರುವ ನಿಡಗಲ್ಲು ಗ್ರಾಮಾಂತರ ಶಾಲೆಗೆ ಕುಂಬಾರ ಅನಸೂಯ ಶಿವಕುಮಾರ್ ದಂಪತಿ ಕಟ್ಟಿಸಿಕೊಟ್ಟ ಶಾಲಾ ಕೊಠಡಿ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಶಾಲೆಗಳಲ್ಲಿ ಮೂಲಭೂತ ಸೌಲಭ್ಯ, ಗುಣಮಟ್ಟದ ಶಿಕ್ಷಣ ಸಿಗುತ್ತದೆಯೇ ಎಂಬುದನ್ನು ಹತ್ತಿರದಿಂದ ಗಮನಿಸಬೇಕಾದ ಅಗತ್ಯವಿದೆ. ಈ ಕೆಲಸವನ್ನು ಆಯಾಯ ಗ್ರಾಮದ ಯುವ ಸಮುದಾಯ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ಜಿ.ಪಂ. ಮಾಜಿ ಸದಸ್ಯ ತಿಮ್ಮಾರೆಡ್ಡಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳಿಲ್ಲದೆ ದನದ ಕೊಟ್ಟಿಗೆಗಳಾಗುತ್ತಿವೆ ಎಂದು ವಿಷಾದಿಸಿದರು.<br /> ಖಾಸಗಿ ಆಸ್ಪತ್ರೆಗಳು ಹಣ ಪೀಕುವ ಕೇಂದ್ರಗಳಾಗುತ್ತಿದ್ದು, ಸಾಮಾನ್ಯ ಜನರ ಬದುಕು ದುರ್ಬರವಾಗುತ್ತಿದೆ. ಈ ಅನ್ಯಾಯವನ್ನು ಪ್ರಶ್ನಿಸುವ, ಪ್ರತಿಭಟಿಸುವ ಪ್ರವೃತ್ತಿಯನ್ನು ಗ್ರಾಮಗಳಲ್ಲಿನ ಯುವ ಜನರು ಬೆಳೆಸಿಕೊಳ್ಳಬೇಕು ಎಂದರು.<br /> <br /> ಜಿ.ಪಂ. ಸದಸ್ಯೆ ನಳಿನಿ ಗೋವಿಂದಪ್ಪ, ತಾ.ಪಂ. ಸದಸ್ಯ ಗೋವಿಂದಪ್ಪ, ಶಾಲಾ ಸಮತಿ ಕಾರ್ಯದರ್ಶಿ ಡಿ.ತಿಮ್ಮರಾಯ ಇತರರು ಇದ್ದರು. ಮುಖ್ಯ ಶಿಕ್ಷಕ ನಾಗಪ್ಪ ಸ್ವಾಗತಿಸಿದರು. ಪಿ.ಎಸ್.ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> ಪಾವಗಡ: ನಿಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವ ಶಾಲೆಗಳ ಗುಣಮಟ್ಟದತ್ತ ಗ್ರಾಮೀಣ ಜನರ ಗಮನ ಹೆಚ್ಚಬೇಕಿದೆ ಎಂದು ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಜಪಾನಂದಜೀ ತಿಳಿಸಿದರು.<br /> ತಾಲ್ಲೂಕಿನ ಎಸ್.ಆರ್.ಪಾಳ್ಯ ಗ್ರಾಮದಲ್ಲಿರುವ ನಿಡಗಲ್ಲು ಗ್ರಾಮಾಂತರ ಶಾಲೆಗೆ ಕುಂಬಾರ ಅನಸೂಯ ಶಿವಕುಮಾರ್ ದಂಪತಿ ಕಟ್ಟಿಸಿಕೊಟ್ಟ ಶಾಲಾ ಕೊಠಡಿ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಶಾಲೆಗಳಲ್ಲಿ ಮೂಲಭೂತ ಸೌಲಭ್ಯ, ಗುಣಮಟ್ಟದ ಶಿಕ್ಷಣ ಸಿಗುತ್ತದೆಯೇ ಎಂಬುದನ್ನು ಹತ್ತಿರದಿಂದ ಗಮನಿಸಬೇಕಾದ ಅಗತ್ಯವಿದೆ. ಈ ಕೆಲಸವನ್ನು ಆಯಾಯ ಗ್ರಾಮದ ಯುವ ಸಮುದಾಯ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ಜಿ.ಪಂ. ಮಾಜಿ ಸದಸ್ಯ ತಿಮ್ಮಾರೆಡ್ಡಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳಿಲ್ಲದೆ ದನದ ಕೊಟ್ಟಿಗೆಗಳಾಗುತ್ತಿವೆ ಎಂದು ವಿಷಾದಿಸಿದರು.<br /> ಖಾಸಗಿ ಆಸ್ಪತ್ರೆಗಳು ಹಣ ಪೀಕುವ ಕೇಂದ್ರಗಳಾಗುತ್ತಿದ್ದು, ಸಾಮಾನ್ಯ ಜನರ ಬದುಕು ದುರ್ಬರವಾಗುತ್ತಿದೆ. ಈ ಅನ್ಯಾಯವನ್ನು ಪ್ರಶ್ನಿಸುವ, ಪ್ರತಿಭಟಿಸುವ ಪ್ರವೃತ್ತಿಯನ್ನು ಗ್ರಾಮಗಳಲ್ಲಿನ ಯುವ ಜನರು ಬೆಳೆಸಿಕೊಳ್ಳಬೇಕು ಎಂದರು.<br /> <br /> ಜಿ.ಪಂ. ಸದಸ್ಯೆ ನಳಿನಿ ಗೋವಿಂದಪ್ಪ, ತಾ.ಪಂ. ಸದಸ್ಯ ಗೋವಿಂದಪ್ಪ, ಶಾಲಾ ಸಮತಿ ಕಾರ್ಯದರ್ಶಿ ಡಿ.ತಿಮ್ಮರಾಯ ಇತರರು ಇದ್ದರು. ಮುಖ್ಯ ಶಿಕ್ಷಕ ನಾಗಪ್ಪ ಸ್ವಾಗತಿಸಿದರು. ಪಿ.ಎಸ್.ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>