ಈ ವೇಳೆ ಮಧ್ಯ ಪ್ರವೇಶಿಸಿದ ಸ್ವಾಮಿ, ‘ತಾಲ್ಲೂಕಿನಲ್ಲಿ ನಕಲಿ ವೈದ್ಯರು ಮತ್ತು ಕ್ಲಿನಿಕ್ಗಳಿವೆ. ಇಲ್ಲಿಯವರೆಗೂ ಯಾರ ವಿರುದ್ಧ ಸೂಕ್ತ ಕ್ರಮ ಜರುಗಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯನಿರ್ವಹಣಾಧಿಕಾರಿ ಜಿ.ಡಿ.ಗಂಗಾಧರ್, ‘ನಕಲಿ ವೈದ್ಯರ ಬಗ್ಗೆ ಮುಲಾಜಿಲ್ಲದೆ ಎಫ್ಐಆರ್ ದಾಖಲಿಸಲಾಗುವುದು’ ಎಂದು ಭರವಸೆ ನೀಡಿದರು.
ಅಧ್ಯಕ್ಷೆ ನಾಗರತ್ನಾ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷೆ ಕೆಂಪಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷೆ ತೀರ್ಥಕುಮಾರಿ ರವಿಕುಮಾರ್, ಸುವರ್ಣ ಶ್ರೀನಿವಾಸ್, ಕೊಡಗಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್, ಬೆಸ್ಕಾಂ ಎಇಇ ಮಾರುತಿ, ಜಿಲ್ಲಾ ಪಂಚಾಯಿತಿ ಎಇಇ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರುಕ್ಮಿಣಮ್ಮ, ಅರಣ್ಯ ಇಲಾಖೆಯ ನಿಸಾರ್ ಅಹ್ಮದ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ ಇದ್ದರು.