ಸಾಲ ಮನ್ನಾ ಯೋಜನೆಯಡಿ ಹೆಸರು ನೋಂದಾಯಿಸಲು ಸಾಕಷ್ಟು ಕಾಲಾವಕಾಶವಿದ್ದು, ಪ್ರತಿ ರೈತರು ಕಡ್ಡಾಯವಾಗಿ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ನ ನಕಲು ಪ್ರತಿ ಹಾಗೂ ಸಾಲಪಡೆದ ಸರ್ವೆ ನಂಬರ್ನ ಮಾಹಿತಿಯನ್ನು ಸ್ವಯಂ ದೃಢೀಕರಿಸಿ, ಸಾಲ ಪಡೆದ ಬ್ಯಾಂಕ್ಗಳಿಗೆ ಸಲ್ಲಿಸಬೇಕು, ಸಹಕಾರಿ ಬ್ಯಾಂಕ್ಗಳಲ್ಲಿ ಬೆಳೆಸಾಲ ಮನ್ನಾ ಪಡೆದ ಫಲಾನುಭವಿಗಳು ವಾಣಿಜ್ಯ ಬ್ಯಾಂಕ್ ಬೆಳೆ ಸಾಲ ಮನ್ನಾ ಯೋಜನೆಯಡಿ ಪಡೆಯಲು ಅರ್ಹರಿರುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.