ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರತಿಭೆಗೆ ಗ್ರಾಮೀಣ–ಪಟ್ಟಣ ಭೇದವಿಲ್ಲ’

Last Updated 8 ಮೇ 2018, 9:27 IST
ಅಕ್ಷರ ಗಾತ್ರ

ಭಾಲ್ಕಿ: ಸಾಧನೆ ಮಾಡಬೇಕು ಎನ್ನುವ ಛಲವಿದ್ದಲ್ಲಿ. ಎಲ್ಲ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬಹುದು. ಪ್ರತಿಭೆಗೆ ಹಳ್ಳಿ-ಪಟ್ಟಣ ಎಂಬ ಭೇದವಿಲ್ಲ ಎಂದು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ನುಡಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

ನಿರಂತರ ಅಧ್ಯಯನ ಸಾಧನೆಗೆ ಸಹಕಾರಿ. ವಿದ್ಯಾರ್ಥಿಗಳು ಸಮಯವನ್ನು ಗೌರವಿಸಬೇಕು. ಅವರ ಎತ್ತರದ ಸಾಧನೆಯಲ್ಲಿ ಶಿಕ್ಷಕರ ಮಾರ್ಗದರ್ಶನ, ಸಹಕಾರ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಕರು ಮಕ್ಕಳ ಸಣ್ಣ ಸಾಧನೆಗೂ ಬೆನ್ನುತಟ್ಟಿ ಪ್ರೋತ್ಸಾಹಿಸಬೇಕು ಎಂದು ಕಿವಿಮಾತು ಹೇಳಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಪಡೆಯಲು ವಿಷಯದ ಆಳವಾದ ಜ್ಞಾನ ಅಗತ್ಯ. ವಿವಿಧ ಮೂಲಗಳಿಂದ ಜ್ಞಾನವನ್ನು ಸಂಗ್ರಹಿಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಬೇಕು ಎಂದು ತಿಳಿಸಿದರು.

ಗುರುಬಸವ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ, ಕಲ್ಲೇಶ್ವರ ದೇವರು, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಮುಖ್ಯಶಿಕ್ಷಕ ಲಕ್ಷ್ಮಣ ಮೇತ್ರೆ, ಸಂಯೋಜಕ ಪ್ರವೀಣ ಖಂಡಾಳೆ ಇದ್ದರು.

  ‘ಬಡತನದಲ್ಲಿ ಅರಳಿದ ಪ್ರತಿಭೆ ಶಿವಲೀಲಾ’

ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಪ್ರೌಢ ಶಾಲೆಯ ಬಡ ವಿದ್ಯಾರ್ಥಿನಿ ಶಿವಲೀಲಾ ರಾಮಲಿಂಗ 610 (97.60) ಅಂಕ ಪಡೆದು ಮೇರು ಸಾಧನೆ ಮಾಡಿದ್ದಾಳೆ.

ಮೂಲತ ಹುಮನಾಬಾದ್ ತಾಲ್ಲೂಕಿನ ಕುಮಾರ ಚಿಂಚೋಳಿ ಗ್ರಾಮದವಳಾದ ಶಿವಲೀಲಾ ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡಿದ್ದಾಳೆ. ಸಂಕಷ್ಟದಲ್ಲಿದ್ದಾಗ ತರನಳ್ಳಿ ಗ್ರಾಮದಲ್ಲಿರುವ ಮಾವ ಅಣೆಪ್ಪಾ ಪಾಟೀಲ ಶೈಕ್ಷಣಿಕ ಜವಬ್ದಾರಿ ಹೊತ್ತು. ನನಗೆ ಎಲ್ಲದಕ್ಕೂ ಪ್ರೋತ್ಸಾಹಿಸಿದ್ದಾರೆ. ಅದರ ಫಲವಾಗಿಯೇ ಈ ಸಾಧನೆ ಹೊರಹೊಮ್ಮಿದೆ. ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದ್ದೇನೆ. ನನ್ನ ಸಾಧನೆಯಲ್ಲಿ ಮಾವಂದಿರ ನಿರಂತರ ಪ್ರೋತ್ಸಾಹ, ಗುರುಗಳ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ. ತಾಯಿ ಕಷ್ಟದಲ್ಲಿದ್ದಾಗ ಮಾವಂದಿರು ಧೈರ್ಯ ತುಂಬಿ ಗುಣಾತ್ಮಕ ಶಿಕ್ಷಣ ಕೊಡಿಸಿದ್ದಾರೆ. ಚೆನ್ನಾಗಿ ಅಭ್ಯಸಿಸಿ ಐಎಎಸ್ ಅಧಿಕಾರಿ ಆಗುವ ಕನಸು ಹೊಂದಿದ್ದೇನೆ ಎಂದು ‘ಪ್ರಜಾವಾಣಿ’ ತಿಳಿಸಿದ್ದಾರೆ.

ತಾಲ್ಲೂಕಿನ ಗೋರ ಚಿಂಚೋಳಿ ಗ್ರಾಮದ ರೈತ ಚಂದ್ರಶೇಖರ ಕಾರಬಾರಿ ಅವರ ಮಗನಾದ ಸಂಗಮೇಶ ಕಾರಬಾರಿ 615 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದ್ದಾನೆ. ತಂದೆ ಕಷ್ಟದಲ್ಲಿಯೂ ಗುಣಾತ್ಮಕ ಶಿಕ್ಷಣ ಕೊಡಿಸಿದ್ದಾರೆ. ಭವಿಷ್ಯದಲ್ಲಿ ಐಐಟಿ ಅಭ್ಯಾಸ ಮಾಡಬೇಕು ಎಂದುಕೊಂಡಿದ್ದೇನೆ ಎನ್ನುತ್ತಾರೆ ಸಂಗಮೇಶ.

ಡೈಮಂಡ್ ಶಾಲೆಗೆ ಉತ್ತಮ ಫಲಿತಾಂಶ

ಭಾಲ್ಕಿ: ಡೈಮಂಡ್ ಶಾಲೆಗೆ ಉತ್ತಮ ಫಲಿತಾಂಶ ಪ್ರಜಾವಾಣಿ ವಾರ್ತೆ ಭಾಲ್ಕಿ: ಇಲ್ಲಿಯ ಡೈಮಂಡ್‌ ಪ್ರೌಢ ಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿ ಜಾನವಿ ಕೃಷ್ಣಾಜಿ 614, ನಿಕಿತಾ ಅನಿಲ್‌ಕುಮಾರ 613 ಅಂಕ ಪಡೆದು ಅಪ್ರತಿಮ ಪ್ರತಿಭೆ ಮೆರೆದಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 108 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಶೇ 90ಕ್ಕಿಂತ ಮೇಲ್ಪಟ್ಟು ಅಂಕ ಪಡೆದಿದ್ದಾರೆ. ಅಗ್ರಶ್ರೇಣಿ 30 , ಪ್ರಥಮ ಶ್ರೇಣಿಯಲ್ಲಿ 72 ವಿದ್ಯಾರ್ಥಿಗಳು ಪಾಸಾಗಿದ್ದು, ಒಟ್ಟಾರೆ ಶಾಲೆಯ ಫಲಿತಾಂಶ 98.36 ಆಗಿದೆ ಎಂದು ಸಂಸ್ಥೆ ಅಧ್ಯಕ್ಷ ಮಸ್ತಾನವಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗ ಸಂಸ್ಥೆಯ ಸಂಸ್ಥಾಪಕ ವೈ.ಮಾಧವರಾವ್‌, ಮುಖ್ಯಶಿಕ್ಷಕ ಧನರಾಜ ನೀಲಂಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT