ಗಾಂಧಿ ಭೇಟಿಯ ಶತಮಾನೋತ್ಸವ ಅಂಗವಾಗಿ ಎಂಜಿಎಂ ಕಾಲೇಜಿನ ಇತಿಹಾಸ ವಿಭಾಗದಿಂದ ಗಾಂಧಿ ಅಧ್ಯಯನ ಕೇಂದ್ರಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಆ.19ರಂದು ಮಧ್ಯಾಹ್ನ 1ರ ಹೊತ್ತಿಗೆ ಮಂಗಳೂರುರೈಲು ನಿಲ್ದಾಣಕ್ಕೆ ಬಂದ ಗಾಂಧೀಜಿಗೆ ಸ್ವಾಗತ ಕೋರಲಾಯಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿ, ಬಂಟ್ವಾಳ, ಮೂಲ್ಕಿ, ಕಾರ್ಕಳ, ಕುಂದಾಪುರ, ಪುತ್ತೂರು, ಕಾಸರಗೋಡಿನಿಂದ ಸಾವಿರಾರು ಜನರು ಭಾಗವಹಿಸಿದ್ದರು ಎಂದು ಸ್ಮರಿಸಿದರು.