ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಕಿಸಾನ್ ಘಟಕ, ಕರ್ನಾಟಕ ಪ್ರಾಂತ ರೈತ ಸಂಘ, ಕಾಂಗ್ರೆಸ್, ಜೆಡಿಎಸ್, ದಲಿತ ಸಂಘರ್ಷ ಸಮಿತಿ, ಸಿಪಿಐಎಂ, ಸಹಭಾಳ್ವೆ, ವೆಲ್ಫೆರ್ ಪಾರ್ಟಿ ಆಫ್ ಇಂಡಿಯಾ, ಮುಸ್ಲಿಂ ಒಕ್ಕೂಟ, ಕರ್ನಾಟಕ ರಾಷ್ಟ್ರ ಸಮಿತಿ, ಸಿಐಟಿಯು, ಭಾರತೀಯ ಕ್ರಿಶ್ಚಿಯನ್ ಒಕ್ಕೂಟ, ಅಂಬೇಡ್ಕರ್ ಯುವ ಸೇನೆ ಬೆಂಬಲ ನೀಡಿವೆ. ಬಂದ್ಗೆ ಉಡುಪಿ ಜಿಲ್ಲೆಯ ರೈತರು, ಕಾರ್ಮಿಕರು, ವ್ಯಾಪಾರಿಗಳು, ಬಸ್ ಮಾಲೀಕರು, ನೌಕರರು ಬೆಂಬಲ ನೀಡಬೇಕು ಎಂದರು.