<p><strong>ಉಡುಪಿ:</strong> ಹೊರ ರಾಜ್ಯಗಳಲ್ಲಿ ನೆಲೆಸಿರುವ ಉಡುಪಿ ಜಿಲ್ಲೆಯ 243 ಮಂದಿ ಭಾನುವಾರ ಜಿಲ್ಲೆಗೆ ಮರಳಿದರು. ಖಾಸಗಿ ವಾಹನಗಳ ಮೂಲಕ ಜಿಲ್ಲೆಯ ಗಡಿ ತಲುಪಿದವರನ್ನು ಚೆಕ್ಪೋಸ್ಟ್ನಲ್ಲಿ ಆರೋಗ್ಯ ತಪಾಸಣೆ ನಡೆಸಿ, ಆಯಾ ತಾಲ್ಲೂಕು ಆಡಳಿತಕ್ಕೆ ಒಪ್ಪಿಸಲಾಯಿತು. ಬಳಿಕ ಎಲ್ಲರನ್ನೂ ಸರ್ಕಾರಿ ಕ್ವಾರಂಟೈನ್ಗೆ ಕರೆದೊಯ್ಯಲಾಯಿತು.</p>.<p>ಕುಂದಾಪುರ ತಾಲ್ಲೂಕಿಗೆ 103, ಬೈಂದೂರಿಗೆ 3, ಕಾರ್ಕಳಕ್ಕೆ 39, ಬ್ರಹ್ಮಾವರಕ್ಕೆ 1, ಉಡುಪಿಗೆ 24, ಹೆಬ್ರಿಗೆ ಇಬ್ಬರು ಬಂದರು. ಹೊರ ರಾಜ್ಯಗಳಿಂದ ಜಿಲ್ಲೆಗೆ ಇದುವರೆಗೂ 471 ಮಂದಿ ಬಂದಿದ್ದಾರೆ. ಜಿಲ್ಲೆಗೆ ಮರಳುತ್ತಿರುವವರ ಪೈಕಿ ಮುಂಬೈನಿಂದ ಬರುತ್ತಿರುವವ ಸಂಖ್ಯೆ ಹೆಚ್ಚಾಗಿದೆ.</p>.<p>ಉಡುಪಿ ಜಿಲ್ಲೆಯ20,000ಕ್ಕೂ ಹೆಚ್ಚು ಮಂದಿ ಹೊರ ಜಿಲ್ಲೆಗಳಲ್ಲಿದ್ದು, ಅವರೆಲ್ಲ ಹಂತಹಂತವಾಗಿ ಜಿಲ್ಲೆಗೆ ಮರಳುತ್ತಿದ್ದಾರೆ. ಮೊದಲ ಹಂತವಾಗಿ ಸ್ವಂತ ವಾಹನ ಹೊಂದಿರುವ ಕುಟುಂಬಗಳಿಗೆ ಮಾತ್ರ ಪಾಸ್ ನೀಡಲಾಗುತ್ತಿದ್ದು, ರೈಲು ಸಂಚಾರ ವ್ಯವಸ್ಥೆಯಾದರೆ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆಗಳಿವೆ.</p>.<p><strong>ಮಾಸ್ಕ್ ಕಡ್ಡಾಯ: ಡಿಸಿ</strong><br />ಸಾರ್ವಜನಿಕರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.</p>.<p>ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಬೆಳಿಗ್ಗೆ 7ರಿಂದ ರಾತ್ರಿ 7ರವರೆಗೆ ಅನುಮತಿ ನೀಡಿದೆ. ಈ ಅವಧಿಯಲ್ಲಿ ಹೊರಬರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಖರೀದಿ ವೇಳೆ ಅಂತರ ಕಾಯ್ದುಕೊಳ್ಳಬೇಕು. ಇಲ್ಲವಾದರೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.</p>.<p>ಪಿಎಸ್ಐಗಳು, ಆರೋಗ್ಯ ನಿರೀಕ್ಷಕರು, ಪಿಡಿಒಗಳು, ತಹಶೀಲ್ದಾರ್ಗಳು, ನಗರಸಭೆ ಆಯುಕ್ತರು ಹಾಗೂ ಉಪ ವಿಭಾಗಾಧಿಕಾರಿಗಳುಕಾರ್ಯಾಚರಣೆ ನಡೆಸುತ್ತಿದ್ದು ಮಾಸ್ಕ್ ಧರಿಸದಿರುವುದು ಕಂಡುಬಂದರೆ ದಂಡ ವಿಧಿಸಲಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ ₹ 200, ಉಳಿದೆಡೆ ₹ 100 ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಹೊರ ರಾಜ್ಯಗಳಲ್ಲಿ ನೆಲೆಸಿರುವ ಉಡುಪಿ ಜಿಲ್ಲೆಯ 243 ಮಂದಿ ಭಾನುವಾರ ಜಿಲ್ಲೆಗೆ ಮರಳಿದರು. ಖಾಸಗಿ ವಾಹನಗಳ ಮೂಲಕ ಜಿಲ್ಲೆಯ ಗಡಿ ತಲುಪಿದವರನ್ನು ಚೆಕ್ಪೋಸ್ಟ್ನಲ್ಲಿ ಆರೋಗ್ಯ ತಪಾಸಣೆ ನಡೆಸಿ, ಆಯಾ ತಾಲ್ಲೂಕು ಆಡಳಿತಕ್ಕೆ ಒಪ್ಪಿಸಲಾಯಿತು. ಬಳಿಕ ಎಲ್ಲರನ್ನೂ ಸರ್ಕಾರಿ ಕ್ವಾರಂಟೈನ್ಗೆ ಕರೆದೊಯ್ಯಲಾಯಿತು.</p>.<p>ಕುಂದಾಪುರ ತಾಲ್ಲೂಕಿಗೆ 103, ಬೈಂದೂರಿಗೆ 3, ಕಾರ್ಕಳಕ್ಕೆ 39, ಬ್ರಹ್ಮಾವರಕ್ಕೆ 1, ಉಡುಪಿಗೆ 24, ಹೆಬ್ರಿಗೆ ಇಬ್ಬರು ಬಂದರು. ಹೊರ ರಾಜ್ಯಗಳಿಂದ ಜಿಲ್ಲೆಗೆ ಇದುವರೆಗೂ 471 ಮಂದಿ ಬಂದಿದ್ದಾರೆ. ಜಿಲ್ಲೆಗೆ ಮರಳುತ್ತಿರುವವರ ಪೈಕಿ ಮುಂಬೈನಿಂದ ಬರುತ್ತಿರುವವ ಸಂಖ್ಯೆ ಹೆಚ್ಚಾಗಿದೆ.</p>.<p>ಉಡುಪಿ ಜಿಲ್ಲೆಯ20,000ಕ್ಕೂ ಹೆಚ್ಚು ಮಂದಿ ಹೊರ ಜಿಲ್ಲೆಗಳಲ್ಲಿದ್ದು, ಅವರೆಲ್ಲ ಹಂತಹಂತವಾಗಿ ಜಿಲ್ಲೆಗೆ ಮರಳುತ್ತಿದ್ದಾರೆ. ಮೊದಲ ಹಂತವಾಗಿ ಸ್ವಂತ ವಾಹನ ಹೊಂದಿರುವ ಕುಟುಂಬಗಳಿಗೆ ಮಾತ್ರ ಪಾಸ್ ನೀಡಲಾಗುತ್ತಿದ್ದು, ರೈಲು ಸಂಚಾರ ವ್ಯವಸ್ಥೆಯಾದರೆ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆಗಳಿವೆ.</p>.<p><strong>ಮಾಸ್ಕ್ ಕಡ್ಡಾಯ: ಡಿಸಿ</strong><br />ಸಾರ್ವಜನಿಕರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.</p>.<p>ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಬೆಳಿಗ್ಗೆ 7ರಿಂದ ರಾತ್ರಿ 7ರವರೆಗೆ ಅನುಮತಿ ನೀಡಿದೆ. ಈ ಅವಧಿಯಲ್ಲಿ ಹೊರಬರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಖರೀದಿ ವೇಳೆ ಅಂತರ ಕಾಯ್ದುಕೊಳ್ಳಬೇಕು. ಇಲ್ಲವಾದರೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.</p>.<p>ಪಿಎಸ್ಐಗಳು, ಆರೋಗ್ಯ ನಿರೀಕ್ಷಕರು, ಪಿಡಿಒಗಳು, ತಹಶೀಲ್ದಾರ್ಗಳು, ನಗರಸಭೆ ಆಯುಕ್ತರು ಹಾಗೂ ಉಪ ವಿಭಾಗಾಧಿಕಾರಿಗಳುಕಾರ್ಯಾಚರಣೆ ನಡೆಸುತ್ತಿದ್ದು ಮಾಸ್ಕ್ ಧರಿಸದಿರುವುದು ಕಂಡುಬಂದರೆ ದಂಡ ವಿಧಿಸಲಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ ₹ 200, ಉಳಿದೆಡೆ ₹ 100 ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>