<p><strong>ಉಡುಪಿ: </strong>ರಾಜ್ಯೋತ್ಸವ ಪ್ರಶಸ್ತಿಗೆ 28,000 ಅರ್ಜಿಗಳು ಬಂದಿದ್ದು ತೆರೆ ಮರೆಯ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.</p>.<p>ಶನಿವಾರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದ್ದು, ಒತ್ತಡಕ್ಕೆ ಮಣಿಯದೆ ಅರ್ಹರನ್ನು ಆಯ್ಕೆ ಮಾಡಲಾಗುವುದು. ಅ.29ಕ್ಕೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದರು.</p>.<p>ಕುಸುಮ್ ಶ್ರೀ ಯೋಜನೆಯಡಿ 1 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದಲ್ಲಿ 1,100 ಫೀಡರ್ಗಳ ಸೋಲಾರಿಕರಣ ನಡೆಯುತ್ತಿದ್ದುರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಮಾಡಲಾಗುವುದು. ಇದರಿಂದ 3.25 ಲಕ್ಷ ರೈತರಿಗೆ ನೆರವಾಗಲಿದೆ ಎಂದು ಸಚಿವರು ಹೇಳಿದರು.</p>.<p>ಹಿಂದೆ, ವೈಯಕ್ತಿಕವಾಗಿ ರೈತರ ಪಂಪ್ಸೆಟ್ಗಳಿಗೆ ಸೋಲಾರ್ ಅಳವಡಿಸಿಕೊಳ್ಳಲು ಶೇ 70ರಷ್ಟು ಸಹಾಯಧನ ನೀಡಲಾಗುತ್ತಿತ್ತು. ಸೋಲಾರ್ ಪಂಪ್ಸೆಟ್ಗಳು 700 ರಿಂದ 800 ಅಡಿ ಆಳದಿಂದ ನೀರೆತ್ತುವುದಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಕುಸುಮ್ ಶ್ರೀ ಯೋಜನೆಯಡಿ ಫೀಡರ್ಗಳ ಸೋಲಾರಿಕರಣ ಮಾಡಲಾಗುತ್ತಿದೆ ಎಂದರು.</p>.<p>ಕಲ್ಲಿದ್ದಲು ಹಾಗೂ ಇಂಧನ ದರಕ್ಕೆ ಅನುಗುಣವಾಗಿ ಹಿಂದೆ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗುತ್ತಿತ್ತು. ಇನ್ಮುಂದೆ ವರ್ಷಕ್ಕೊಮ್ಮೆ ದರ ಪರಿಷ್ಕರಣೆ ಮಾಡುವಂತೆ ಮುಖ್ಯಮಂತ್ರಿ ಹಾಗೂ ಕೆಆರ್ಸಿಗೆ ಮನವಿ ಸಲ್ಲಿಸಲಾಗಿದೆ. ಎಲ್ಲ ಸರ್ಕಾರಿ ಕಚೇರಿಗಳಿಗೂ ಪ್ರೀಪೇಯ್ಡ್ ಮೀಟರ್ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ರಾಜ್ಯೋತ್ಸವ ಪ್ರಶಸ್ತಿಗೆ 28,000 ಅರ್ಜಿಗಳು ಬಂದಿದ್ದು ತೆರೆ ಮರೆಯ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.</p>.<p>ಶನಿವಾರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದ್ದು, ಒತ್ತಡಕ್ಕೆ ಮಣಿಯದೆ ಅರ್ಹರನ್ನು ಆಯ್ಕೆ ಮಾಡಲಾಗುವುದು. ಅ.29ಕ್ಕೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದರು.</p>.<p>ಕುಸುಮ್ ಶ್ರೀ ಯೋಜನೆಯಡಿ 1 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದಲ್ಲಿ 1,100 ಫೀಡರ್ಗಳ ಸೋಲಾರಿಕರಣ ನಡೆಯುತ್ತಿದ್ದುರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಮಾಡಲಾಗುವುದು. ಇದರಿಂದ 3.25 ಲಕ್ಷ ರೈತರಿಗೆ ನೆರವಾಗಲಿದೆ ಎಂದು ಸಚಿವರು ಹೇಳಿದರು.</p>.<p>ಹಿಂದೆ, ವೈಯಕ್ತಿಕವಾಗಿ ರೈತರ ಪಂಪ್ಸೆಟ್ಗಳಿಗೆ ಸೋಲಾರ್ ಅಳವಡಿಸಿಕೊಳ್ಳಲು ಶೇ 70ರಷ್ಟು ಸಹಾಯಧನ ನೀಡಲಾಗುತ್ತಿತ್ತು. ಸೋಲಾರ್ ಪಂಪ್ಸೆಟ್ಗಳು 700 ರಿಂದ 800 ಅಡಿ ಆಳದಿಂದ ನೀರೆತ್ತುವುದಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಕುಸುಮ್ ಶ್ರೀ ಯೋಜನೆಯಡಿ ಫೀಡರ್ಗಳ ಸೋಲಾರಿಕರಣ ಮಾಡಲಾಗುತ್ತಿದೆ ಎಂದರು.</p>.<p>ಕಲ್ಲಿದ್ದಲು ಹಾಗೂ ಇಂಧನ ದರಕ್ಕೆ ಅನುಗುಣವಾಗಿ ಹಿಂದೆ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗುತ್ತಿತ್ತು. ಇನ್ಮುಂದೆ ವರ್ಷಕ್ಕೊಮ್ಮೆ ದರ ಪರಿಷ್ಕರಣೆ ಮಾಡುವಂತೆ ಮುಖ್ಯಮಂತ್ರಿ ಹಾಗೂ ಕೆಆರ್ಸಿಗೆ ಮನವಿ ಸಲ್ಲಿಸಲಾಗಿದೆ. ಎಲ್ಲ ಸರ್ಕಾರಿ ಕಚೇರಿಗಳಿಗೂ ಪ್ರೀಪೇಯ್ಡ್ ಮೀಟರ್ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>