ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಕಾರ್ಯಕ್ರಮವನ್ನು ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಉದ್ಘಾಟಿಸಲಿದ್ದಾರೆ. ತೋಂಟದಾರ್ಯ ಶಾಖಾಮಠದ ನಿಜಗುಣ ಪ್ರಭು ಸ್ವಾಮೀಜಿ ಮಾತನಾಡಲಿದ್ದಾರೆ. ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಹಾದೇವಸ್ವಾಮಿ, ಮುಖಂಡರಾದ ಕೆ.ಎಲ್.ಅಶೋಕ್, ಅಖಿಲ ಭಾರತ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ನ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.