ಉಡುಪಿ: ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಕ್ರಾಸ್ ಸಮೀಪ ಶನಿವಾರ ಗಾಂಜಾ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 49 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಾದ ಕುರತಪಾಂಡಿ ಹಾಗೂ ವಾನುವಲ್ ದಾರ್ ಎಂಬುವರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ನೋಂದಣಿಯ ಲಾರಿಯಲ್ಲಿ ಗಾಂಜಾವನ್ನು ಸಾಗಿಸಲಾಗುತ್ತಿತ್ತು.
ವಶಪಡಿಸಿಕೊಂಡ ಗಾಂಜಾ ಮೌಲ್ಯ 14.75 ಎಂದು ಅಂದಾಜಿಸಲಾಗಿದೆ. ಲಾರಿ ಹಾಗೂ 2 ಮೊಬೈಲ್ಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.