ಉಡುಪಿ: ಧರ್ಮಸ್ಥಳ ಸಂಸ್ಥೆಯ ವತಿಯಿಂದ ಉಚಿತವಾಗಿ ನೀಡಲಾದ 5 ಆಮ್ಲಜನಕ ಸಾಂದ್ರಕಗಳನ್ನು ಮಂಗಳವಾರ ಜಿಲ್ಲಾಧಿಕಾರಿ ಮುಖಾಂತರ ಉಡುಪಿ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಅವರಿಗೆ ಹಸ್ತಾಂತರ ಮಾಡಲಾಯಿತು.
ಈಗಾಗಲೇ ಧರ್ಮಸ್ಥಳ ಸಂಸ್ಥೆಯಿಂದ ಕೋವಿಡ್ಗೆ 5.5 ಟನ್ ಆಮ್ಲಜನಕವನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ಒದಗಿಸಿಕೊಡಲಾಗಿದೆ. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಒಟ್ಟು 6 ಯೋಜನಾ ಕಚೇರಿಗಳ ಮುಖಾಂತರ 6 ವಾಹನಗಳನ್ನು ಕೋವಿಡ್ ಸೋಂಕಿತ ರೋಗಿಗಳನ್ನು ಬಳಕಗೆ ನೀಡಲಾಗಿದೆ. 134 ರೋಗಿಗಳ ಸಂಚಾರಕ್ಕೆ ಬಳಸಿಕೊಳ್ಳಲಾಗಿದೆ ಎಂದು ಗಣೇಶ್ ಬಿ ತಿಳಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಗಣೇಶ್ ಬಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಅಮೀನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಇದ್ದರು.