<p><strong>ಹಿರಿಯಡಕ: </strong>ಆಹಾರ ಅರಸುತ್ತ ಬಂದ ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪೆರ್ಡೂರು ಸಮೀಪದ ಬೆಳ್ಳರ್ಪಾಡಿಯ ಸುತ್ತುಬಲ್ಲೆ ಎಂಬಲ್ಲಿ ಸೋಮವಾರ ಬೆಳಕಿಗೆ ಬಂದಿದೆ.</p>.<p>ಆಹಾರ ಅರಸುತ್ತ ಬಂದ 2 ವರ್ಷ ಪ್ರಾಯದ ಗಂಡು ಚಿರತೆಯು ಸುತ್ತುಬಲ್ಲೆಯ ಸತೀಶ್ ಕುಲಾಲ್ ಎಂಬುವವರ ಆವರಣವಿಲ್ಲದ ಬಾವಿಗೆ ಬಿದ್ದಿದೆ. ನೀರು ತುಂಬಿದ್ದ ಬಾವಿಯಿಂದ ಮೇಲೆ ಬರಲಾಗದೆ ಚಿರತೆ ಸಾವನ್ನಪ್ಪಿದ್ದು, ಚಿರತೆಯ ಮೃತದೇಹವನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.</p>.<p>ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ಸಹಕಾರದಿಂದ ಚಿರತೆಯ ಮೃತದೇಹವನ್ನು ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ. ಹಿರಿಯಡಕದ ಪಶುವೈದ್ಯಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಅವರು ಮರಣೋತ್ತರ ಪರೀಕ್ಷೆ ನಡೆಸಿದರು. ಅರಣ್ಯ ಇಲಾಖಾಧಿಕಾರಿಗಳು ಪ್ರಾಥಮಿಕ ತನಿಖೆಯನ್ನು ನಡೆಸಿದ ಬಳಿಕ ಚಿರತೆಯ ಮೃತದೇಹವನ್ನು ದಫನ ಮಾಡಲಾಯಿತು.</p>.<p>ಮೂಡುಬಿದಿರೆ ಉಪವಿಭಾಗದ ಎಸಿಎಫ್ ಸುಬ್ರಹ್ಮಣ್ಯ, ಆರ್ಎಫ್ಒ ಸುಬ್ರಹ್ಮಣ್ಯ ಆಚಾರ್, ಡಿಆರ್ಎಫ್ಒ ಕರುಣಾಕರ ಜೆ. ಆಚಾರ್ಯ ಪೆರ್ಡೂರು, ಇಲಾಖಾ ಸಿಬ್ಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯಡಕ: </strong>ಆಹಾರ ಅರಸುತ್ತ ಬಂದ ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪೆರ್ಡೂರು ಸಮೀಪದ ಬೆಳ್ಳರ್ಪಾಡಿಯ ಸುತ್ತುಬಲ್ಲೆ ಎಂಬಲ್ಲಿ ಸೋಮವಾರ ಬೆಳಕಿಗೆ ಬಂದಿದೆ.</p>.<p>ಆಹಾರ ಅರಸುತ್ತ ಬಂದ 2 ವರ್ಷ ಪ್ರಾಯದ ಗಂಡು ಚಿರತೆಯು ಸುತ್ತುಬಲ್ಲೆಯ ಸತೀಶ್ ಕುಲಾಲ್ ಎಂಬುವವರ ಆವರಣವಿಲ್ಲದ ಬಾವಿಗೆ ಬಿದ್ದಿದೆ. ನೀರು ತುಂಬಿದ್ದ ಬಾವಿಯಿಂದ ಮೇಲೆ ಬರಲಾಗದೆ ಚಿರತೆ ಸಾವನ್ನಪ್ಪಿದ್ದು, ಚಿರತೆಯ ಮೃತದೇಹವನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.</p>.<p>ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ಸಹಕಾರದಿಂದ ಚಿರತೆಯ ಮೃತದೇಹವನ್ನು ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ. ಹಿರಿಯಡಕದ ಪಶುವೈದ್ಯಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಅವರು ಮರಣೋತ್ತರ ಪರೀಕ್ಷೆ ನಡೆಸಿದರು. ಅರಣ್ಯ ಇಲಾಖಾಧಿಕಾರಿಗಳು ಪ್ರಾಥಮಿಕ ತನಿಖೆಯನ್ನು ನಡೆಸಿದ ಬಳಿಕ ಚಿರತೆಯ ಮೃತದೇಹವನ್ನು ದಫನ ಮಾಡಲಾಯಿತು.</p>.<p>ಮೂಡುಬಿದಿರೆ ಉಪವಿಭಾಗದ ಎಸಿಎಫ್ ಸುಬ್ರಹ್ಮಣ್ಯ, ಆರ್ಎಫ್ಒ ಸುಬ್ರಹ್ಮಣ್ಯ ಆಚಾರ್, ಡಿಆರ್ಎಫ್ಒ ಕರುಣಾಕರ ಜೆ. ಆಚಾರ್ಯ ಪೆರ್ಡೂರು, ಇಲಾಖಾ ಸಿಬ್ಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>