ಜಿಲ್ಲೆಯಲ್ಲಿ ಪಡಿತರ ಧಾನ್ಯವನ್ನು ದಾಸ್ತಾನುಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಜಾಲ ಸಕ್ರಿಯವಾಗಿದ್ದು, ಕಳೆದ ತಿಂಗಳು ಕುಂದಾಪುರ ತಾಲ್ಲೂಕಿನಲ್ಲಿ ದಂಧೆಕೋರರನ್ನು ಬಂಧಿಸಲಾಗಿತ್ತು. ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಹಾಗೂ ಸಾಗಾಟ ಮಾಡುವುದು ಕಂಡುಬಂದರೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಜತೆಗೆ, ಸಾರ್ವಜನಿಕರು ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ ಸಿಗುವ ಅಕ್ಕಿಯನ್ನು ಮಾರಾಟ ಮಾಡದೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.