ಚಿತ್ರ ನಿರ್ದೇಶಕ ಹಯವದನ್ ಮಾತನಾಡಿ, ದೊಡ್ಡ ಬಜೆಟ್ನಲ್ಲಿ ಒಂದು ವರ್ಷದಲ್ಲಿ ಚಿತ್ರ ನಿರ್ಮಿಸುವ ಗುರಿ ಇರಿಸಿಕೊಳ್ಳಲಾಗಿದೆ. ವಾದಿರಾಜರ ಜನನ, ಬಾಲ್ಯ, ಸನ್ಯಾಸ ಸ್ವೀಕಾರ, ಸಮಾಜಮುಖಿ ಕಾರ್ಯಗಳು, ಕೊಡುಗೆಗಳನ್ನು ಚಿತ್ರದಲ್ಲಿ ತೋರಿಸಲಾಗುವುದು. ಹೂವಿನಕೆರೆ ಸುತ್ತ ಮುತ್ತ ನಡೆಯುವ ಚಿತ್ರೀಕರಣದಲ್ಲಿ ಅವರ ಜೀವಿತಾವಧಿಯ 15-16ನೇ ಶತಮಾನದ ಕಾಲಘಟ್ಟಕ್ಕೆ ಹೊಂದಿಸುವ ಸಿದ್ಧತೆಗಳನ್ನು ಮಾಡಲಾಗುವುದು. ಅವರು ರಚಿಸಿದ ಜನಪ್ರಿಯ ಹಾಡುಗಳನ್ನು ಬಳಸಿಕೊಳ್ಳಲಾಗುವುದು. ಅವರ ಪಾತ್ರವನ್ನು ಯಾರು ಮಾಡುತ್ತಾರೆಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದರು.