ಅಲೆವೂರಿನ ಸಂದೇಶ್ ಕುಲಾಲ್ (28) ಮೃತ ಯುವಕ. ಪ್ರೇಮವೈಫಲ್ಯದಿಂದ ತೀವ್ರ ಮನನೊಂದಿದ್ದ ಸಂದೇಶ್ ಸೋಮವಾರ ಸಂಜೆ ಬೈಕ್ನಲ್ಲಿ ಹೋಗುತ್ತಿದ್ದ ಸೌಮ್ಯಶ್ರೀ ವಿಠಲ ಭಂಡಾರಿ ಅವರನ್ನು ಅಡ್ಡಗಟ್ಟಿ ಮನಬಂದಂತೆ ಚಾಕುವಿನಿಂದ ಇರಿದಿದ್ದ. ಬಳಿಕ ತಾನೂ ಇರಿದುಕೊಂಡಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನೂ ಸ್ಥಳೀಯರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು.